Breaking News

ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ

Spread the love

ಬೆಂಗಳೂರು: ಲೊಕೇಷನ್ ಕಳುಹಿಸಿದ ಜಾಗಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಅಶೋಕನಗರದಲ್ಲಿ ಈ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಮೊಹಮ್ಮದ್ ಶಫಿ ಎಂದು ಗುರುತಿಸಲಾಗಿದೆ.

ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ

ಕೊರಿಯರ್ ಮಾಡಲು ಕಳುಹಿಸಿದ ಲೊಕೇಷನ್ ಗೆ ಬರದೇ ಲ್ಯಾಂಡ್ ಮಾರ್ಕ್ ಕೇಳಿದ್ದಕ್ಕೆ ಕೋಪಗೊಂಡು ದುಷ್ಕರ್ಮಿ ಯುವಕನಿಗೆ ಚಾಕು ಇರಿದಿದ್ದಾನೆ. ಅಟ್ಟಾಡಿಸಿಕೊಂಡು ಚಾಕು ಇರಿದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.


Spread the love

About Laxminews 24x7

Check Also

ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಉರುಳಿದೆ.

Spread the loveಬೆಳಗಾವಿ :ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಮತ್ತು ಕೊಂಬೆಗಳು ಉರುಳಿ ಬಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ