Breaking News
Home / Uncategorized / ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ,:ಕರವೇ ಪ್ರತಿಭಟನೆ ನಿರ್ಧಾರ

ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ,:ಕರವೇ ಪ್ರತಿಭಟನೆ ನಿರ್ಧಾರ

Spread the love

ಬೆಂಗಳೂರು, ನ.26- ಮರಾಠ ಅಭಿವೃದ್ಧಿ ನಿಗಮ ರಚನೆ ರಾಜಕೀಯ ಪ್ರೇರಿತ, ಸರ್ಕಾರದ ದುಡುಕಿನ ನಿರ್ಧಾರ ಹಾಗೂ ಅಸಾಂವಿಧಾನಿಕ ತೀರ್ಮಾನವಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ತೀವ್ರವಾಗಿ ವಿರೋಸುತ್ತದೆ ಎಂದು ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಮರಾಠ ಅಭಿವೃದ್ಧಿ ನಿಗಮ ವಿರೋಸಿ ಕರ್ನಾಟಕ ಬಂದ್‍ಗೆ ಕನ್ನಡ ಒಕ್ಕೂಟ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ರಕ್ಷಣಾ ವೇದಿಕೆ ರಾಜ್ಯ ಪದಾಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ಬಂದ್‍ಗೆ ಬೆಂಬಲ ನೀಡುವುದಾಗಿ ಘೋಷಿಸಿದರು.

ರಾಜ್ಯ ಸರ್ಕಾರ ಇಂತಹ ಸೂಕ್ಷ್ಮ ನಿರ್ಧಾರ ಕೈಗೊಳ್ಳುವ ಮುನ್ನ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಸಭೆ ಕರೆದು ಸೌಹಾರ್ದಯುತವಾಗಿ ಬಗೆಹರಿಸಬಹುದಿತ್ತು. ಆದರೆ, ಮುಖ್ಯಮಂತ್ರಿಗಳಾದಿಯಾಗಿ ಹಲವು ಶಾಸಕರು, ಬಿಜೆಪಿ ಮುಖಂಡರು ಪ್ರಚೋದನಾಕಾರಿ ಹೇಳಿಕೆ ನೀಡಿ ಕನ್ನಡಿಗರನ್ನು ಭಾವನಾತ್ಮಕವಾಗಿ ಕೆರಳಿಸಿ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ