Breaking News
Home / ರಾಜ್ಯ / ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

ನಮಗೆ ನೀರು ಕೊಡದಿದ್ರೆ ಪೈಪ್‍ಲೈನ್ ಒಡೆದು ಹಾಕ್ತೀನಿ: ಶಿವಲಿಂಗೇಗೌಡ

Spread the love

ಹಾಸನ: ನಮಗೆ ನೀರು ಕೊಡದೆ ಪೈಪ್ ಲೈನ್ ತೆಗೆದುಕೊಂಡು ಹೋದರೆ ಅದನ್ನು ಒಡೆದು ಹಾಕಿಸ್ತೀನಿ. ಏನಾಗುತ್ತೋ ಆಗಲಿ ಎಂದು ಶಾಸಕ ಶಿವಲಿಂಗೇಗೌಡ ಕೆಡಿಪಿ ಸಭೆಯಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಹಾಸನದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಸಚಿವ ಗೋಪಾಲಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯುತ್ತಿತ್ತು. ಈ ವೇಳೆ ಮಾತನಾಡಿದ ಶಾಸಕ ಶಿವಲಿಂಗೇಗೌಡ ಕೃಷ್ಣಾ ಬೇಸಿನ್ ನಲ್ಲಿ ನಮಗೂ ಹಕ್ಕಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಎರಡು ಹೋಬಳಿಗಳು ಕೃಷ್ಣಾ ಬೇಸಿನ್‍ಗೆ ಸೇರಿದೆ. ನಮಗೆ ನೀರು ಕೊಡ್ತೀವಿ ಅಂತಾ ಕ್ಯಾಬಿನೆಟ್ ನಲ್ಲಿ ಹೇಳಿದ್ದರು. ಆ ಪ್ರಕಾರ ನಮ್ ಅರಸೀಕೆರೆ ತಾಲೂಕಿನ 20 ಕೆರೆಗಳಿಗೆ ನೀರು ಹರಿಸಬೇಕು. ಆದರೆ ಈಗ ಒಂದೇ ಒಂದು ಕಟ್ಟೆ ಸೇರಿಸಿದ್ದಾರೆ. ನಮ್ ತಾಲೂಕಿನಲ್ಲಿ ಪೈಪ್‍ಲೈನ್ ಹಾಕಿ ಚಿಕ್ಕಮಗಳೂರಿಗೆ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ನೀರು ಕೊಡದೆ ಇದ್ದರೆ ನಾನು ಪೈಪ್ ಹಾಕೋಕೆ ಬಿಡ್ತೀನಾ, ನೋಡೋಣ ಎಲ್ಲಾ ಪೈಪ್ ಗಳನ್ನು ಒಡೆದು ಹಾಕಿಸ್ತೀನಿ ಎಂದ ಶಿವಲಿಂಗೇಗೌಡ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ