Breaking News

ಪ.ಪಂ ಸದಸ್ಯ ನಾಗರಾಜ ಅಪಹರಣ: ತಾಯಿ ಆಸ್ಪತ್ರೆಗೆ ದಾಖಲು

Spread the love

ನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ, ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅಪಹರಣ ಪ್ರಕರಣದಿಂದ, ತೀವ್ರ ನೊಂದು ಅನಾರೋಗ್ಯಕ್ಕೆ ಈಡಾಗಿರುವ ಅವರ ತಾಯಿಯನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಹೃದಯ ಸಂಬಂಧಿ ಕಾಯಿಲೆಯಿಂದ ಅವರು ಬಳಲುತ್ತಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾರ್ವಜನಿಕ ವೇದಿಕೆಯಲ್ಲಿ ಪುತ್ರನ ಅಪಹರಣ ಪ್ರಕರಣದಿಂದ ನೊಂದು ತಂದೆ ದುಃಖಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

‘ಬೆಂಗಳೂರಿನಲ್ಲಿ ನಾಗರಾಜ ಅರಾಮವಾಗಿ ತಿರುಗಾಡುತ್ತಿದ್ದಾನೆ ಎಂದು ಪೊಲೀಸರು ತಮ್ಮ ಬಳಿ ಇರುವ ವಿಡಿಯೊ ತೋರಿಸಿ ಹೇಳುತ್ತಿದ್ದಾರೆ. ಆದರೆ, ನಾಗರಾಜ ಅವರನ್ನು ಕರೆತರುವ ಯಾವುದೇ ಪ್ರಯತ್ನಗಳು ನಡೆಯುತ್ತಿಲ್ಲ’ ಎಂದು ಬಿಜೆಪಿ ಆರೋಪಿಸಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ