Breaking News

ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ

Spread the love

ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ.

ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ ಇದೆ. ಇದರ ಬಗ್ಗೆ ಶಾಸಕಾಂಗ ಸಭೆಯಲ್ಲಿ ನಿರ್ಣಯವಾಗಬೇಕು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ‌ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದವರಾಗಬೇಕು ಎಂಬ ವಿಚಾರ ಅಲ್ಲ. ಇವಲ್ಲ ಪ್ರಶ್ನೆ ಉದ್ಬವಿಸುವುದು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಮೇಲೆ. ಎಲ್ಲ ಶಾಸಕ, ಸಚಿವರು ಸಿದ್ದರಾಮಯ್ಯ ಅವರ ಪರವಾಗಿ ಇದ್ದಾರೆ ಎಂದು‌ ಸ್ಪಷ್ಟನೆ ನೀಡಿದರು.


Spread the love

About Laxminews 24x7

Check Also

ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ:VTU RESULT RECORD

Spread the loveಬೆಳಗಾವಿ: ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸುವ ಮೂಲಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ