Breaking News

ಅಸುರಕ್ಷಿತ ಸ್ಥಳಗಳಲ್ಲಿ ಪಟಾಕಿ ಮಳಿಗೆ!

Spread the love

ಹುಬ್ಬಳ್ಳಿ: ಗಣೇಶ ಹಬ್ಬದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮತ್ತು ಜಿಲ್ಲೆಯ ವಿವಿಧೆಡೆ ಇರುವ ಪಟಾಕಿ ಸಂಗ್ರಹ ಗೋದಾಮು ಹಾಗೂ ಮಾರಾಟ ಮಳಿಗೆಗಳ ಪರಿಶೀಲನೆಗೆ ಮುಂದಾಗಿದೆ. ನಿಯಮ ಉಲ್ಲಂಘಿಸಿದ ಮಳಿಗೆಗಳ ಮಾಲೀಕರಿಗೆ ನೋಟಿಸ್‌ ನೀಡಿ, ಬೀಗ ಹಾಕಲು ನಿರ್ಧರಿಸಿದೆ.

ಹುಬ್ಬಳ್ಳಿ: ಅಸುರಕ್ಷಿತ ಸ್ಥಳಗಳಲ್ಲಿ ಪಟಾಕಿ ಮಳಿಗೆ!

ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಮಹಾನಗರ‌ ಪಾಲಿಕೆ ಅಧಿಕಾರಿಗಳ ವಿಶೇಷ ತಂಡ, ಪಟಾಕಿ ಅಂಗಡಿಗಳ ಪರಿಶೀಲನೆ ನಡೆಸಲು ಸಿದ್ಧತೆ ನಡೆಸಿವೆ. ಅಂಗಡಿಗಳ ಪರವಾನಗಿ, ಕೈಗೊಂಡ ಮುಂಜಾಗ್ರತಾ ಕ್ರಮಗಳು, ಹಸಿರು ಪಟಾಕಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ. ಹಬ್ಬಕ್ಕಿಂತ ಮೊದಲು ಪರಿಶೀಲನಾ ವರದಿ ನೀಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಧಾರವಾಡ ಜಿಲ್ಲೆ ಸೇರಿದಂತೆ ಅವಳಿನಗರದಲ್ಲಿ 29 ಪಟಾಕಿ ಮಾರಾಟ ಮಳಿಗೆಗಳು ಹಾಗೂ ಎರಡು ಪಟಾಕಿ ಸಂಗ್ರಹ ಗೋದಾಮುಗಳಿವೆ. ಪಟಾಕಿ ಸಂಗ್ರಹ ಮತ್ತು ಮಾರಾಟ ಮಾಡಲು ಮಹಾನಗರ ಪಾಲಿಕೆ, ತಾಲ್ಲೂಕಾಡಳಿತ ಮತ್ತು ಅಗ್ನಿ ಶಾಮಕ ದಳದಿಂದ ನಿಪೇಕ್ಷಣಾ ಪತ್ರ ಪಡೆಯಬೇಕು. ಅವುಗಳನ್ನು ಪರಿಶೀಲಿಸಿ ಜಿಲ್ಲಾಡಳಿತ ಪರವಾನಗಿ ನೀಡುತ್ತದೆ. ಆ ಸಂದರ್ಭ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸಲಾಗುತ್ತದೆ. ಆದರೆ, ನಗರ ಮತ್ತು ಪಟ್ಟಣಗಳಲ್ಲಿರುವ ಬಹುತೇಕ ಪಟಾಕಿ ಮಾರಾಟ ಮಳಿಗೆಗಳು ಸುರಕ್ಷತಾ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಸರ್ಕಾರ ಪತನ: ಭವಿಷ್ಯ ನುಡಿದ ಜಗದೀಶ್‌ ಶೆಟ್ಟರ್

Spread the love ಹುಬ್ಬಳ್ಳಿ, ಸೆಪ್ಟೆಂಬರ್‌ 11: ಕಾಂಗ್ರೆಸ್ ನಲ್ಲಿನ ಆಂತರಿಕ ವಿಚಾರ ದೊಡ್ಡ ಪ್ರಮಾಣದಲ್ಲಿ ಇದೆ. ಅದು ಬಹಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ