Breaking News

ಮಂಡ್ಯದಲ್ಲಿ 10 ಸಾವಿರ ಲಂಚ ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿ FDA ಲೋಕಾಯುಕ್ತ ಬಲೆಗೆ

Spread the love

ಮಂಡ್ಯ: ಜಿಲ್ಲೆಯಲ್ಲಿ ರೈತರೊಬ್ಬರಿಂದ 10,000 ಲಂಚವನ್ನು ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿಯ ಎಫ್ ಡಿಎ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ತಹಶೀಲ್ದಾರ್ ಕಚೇರಿಯ ಲಂಚಾವತಾರ ಬಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ರೈತ ಮೋಹನ್ ಎಂಬುವರು ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

 

ಇಂದು ಮಂಡ್ಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿಯನ್ನು ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಕೆಡವಿದ್ದಾರೆ.

ಲೋಕಾಯುಕ್ತ ಸಿಪಿಐ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಂಡ್ಯ ತಹಶೀಲ್ದಾರ್ ಕಚೇರಿಯ ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ