Breaking News

ಲಕ್ಷ್ಮೇಶ್ವರ: ರೈತನ ಕೈ ಹಿಡಿದ ತರಕಾರಿ ಕೃಷಿ

Spread the love

ಕ್ಷ್ಮೇಶ್ವರ: ಅಲ್ಪಸ್ವಲ್ಪ ಭೂಮಿಯಲ್ಲೇ ಕಷ್ಪಪಟ್ಟು, ವಿವಿಧ ತರಕಾರಿಗಳನ್ನು ಬೆಳೆದು ಸೈ ಎನಿಸಿಕೊಂಡವರು ತಾಲ್ಲೂಕಿನ ಗುಲಗಂಜಿಕೊಪ್ಪ ಗ್ರಾಮದ ರಾಮನಗೌಡ ಶಂಕರಗೌಡ ದುರುಗನಗೌಡ್ರ.

ಮೂಲತಃ ಲಕ್ಷ್ಮೇಶ್ವರ ತಾಲ್ಲೂಕು ಗುಲಗಂಜಿಕೊಪ್ಪದ ನಿವಾಸಿಯಾದ ರಾಮನಗೌಡ್ರ ಈಗ ಲಕ್ಷ್ಮೇಶ್ವರದ ರಂಭಾಪುರಿ ನಗರದ ಆಶ್ರಯ ಕಾಲೊನಿಯಲ್ಲಿ ವಾಸವಾಗಿದ್ದಾರೆ.

 

ಲಕ್ಷ್ಮೇಶ್ವರದ ಮಾನ್ವಿ ಎಂಬುವವರಿಗೆ ಸೇರಿದ ಆರು ಎಕರೆ ತೋಟವನ್ನು ವರ್ಷಕ್ಕೆ ₹50 ಸಾವಿರದಂತೆ ಇವರು ಲಾವಣಿ ಆಧಾರದ ಮೇಲೆ ಪಡೆದುಕೊಂಡು ವಿವಿಧ ತರಕಾರಿ, ಗಲಾಟೆ ಹೂವು ಬೆಳೆಯುತ್ತಿದ್ದಾರೆ.

ಹದಿನೈದು ಗುಂಟೆಯಲ್ಲಿ ಗಲಾಟಿ ಹೂ, 15 ಗುಂಟೆಯಲ್ಲಿ ಬದನೆಕಾಯಿ, ಒಂದು ಎಕರೆಯಲ್ಲಿ ಸವತೆಕಾಯಿ, ಒಂದು ಎಕರೆಯಲ್ಲಿ ಟೊಮೆಟೊ ಕೃಷಿ ಮಾಡುತ್ತಿದ್ದಾರೆ.

ಸುರೇಶ ಉಂಕಿ ಅವರ ಹೊಲವನ್ನು ಲಾವಣಿ ಹಾಕಿಸಿಕೊಂಡು ಅದರಲ್ಲಿ ಕ್ಯಾಬೀಜ್ ಬೆಳೆಯುತ್ತಿದ್ದಾರೆ. ಈವರೆಗೆ ಇವರು ₹2 ಲಕ್ಷ ಖರ್ಚು ಮಾಡಿದ್ದಾರೆ. ಬದನೆಕಾಯಿ ಸಸಿಗಳನ್ನು ತಾವೇ ಬೆಳೆಸಿ ಅವುಗಳನ್ನು ನಾಟಿ ಮಾಡಿದ್ದು, ಇನ್ನು ಹದಿನೈದು ದಿನಗಳಲ್ಲಿ ಇಳುವರಿ ಆರಂಭವಾಗಲಿದೆ.

ಈಗಾಗಲೇ ಗಲಾಟಿ ಹೂ ಹಾಗೂ ಸವತೆಕಾಯಿಗಳನ್ನು ಪ್ರತಿದಿನ ಮಾರಾಟ ಮಾಡುತ್ತಿದ್ದಾರೆ.
ಸದ್ಯ ಸವತೆ ಹಾಗೂ ಹೂವಿಗೆ ಉತ್ತಮ ಬೆಲೆ ಇದ್ದು, ರೈತನ ಪಾಲಿಗೆ ವರದಾನವಾಗಿದೆ.

ಕೆ.ಜಿ ಹೂವಿನ ಬೆಲೆ ₹30 ಇದೆ. ಹಬ್ಬ ಹರಿದಿನಗಳಲ್ಲಿ ದರ ಮತ್ತಷ್ಟು ಹೆಚ್ಚಾಗುತ್ತದೆ.

ಬೆಳೆಗಳಿಗೆ ವರುಣರಾಯನ ಶಾಪ: ಈ ವರ್ಷ ಸತತ ಎರಡು ತಿಂಗಳವರೆಗೆ ನಿರಂತರವಾಗಿ ಮಳೆ ಸುರಿಯಿತು. ಇದು ತರಕಾರಿ ಕೃಷಿ ಮೇಲೆ ನೇರ ಪರಿಣಾಮ ಬೀರಿದೆ. ಮಳೆಯಿಂದಾಗಿ ಟೊಮೆಟೊ ಹಣ್ಣು ಗಿಡದಲ್ಲಿಯೇ ಕೊಳೆಯಿತು. ಅಲ್ಲದೆ ಉತ್ತಮ ದರವೂ ಸಿಗಲಿಲ್ಲ. ಇದರಿಂದಾಗಿ ನಷ್ಟ ಅನುಭವಿಸಿದ ಅವರು ಟೊಮೆಟೊ ಬಳ್ಳಿಯನ್ನು ಕಿತ್ತು ಹಾಕಿದ್ದಾರೆ. ಸವತೆಕಾಯಿ ಮತ್ತು ಗಲಾಟೆ ಹೂವಿನಿಂದ ಆದಾಯ ಕಂಡುಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ