Breaking News

ರೇಣುಕಸ್ವಾಮಿ ಹತ್ಯೆ ಬಳಿಕ ಪವಿತ್ರಾ ಗೌಡ ಕರೆ ಮಾಡಿದ್ದು ಯಾರಿಗೆ, ಹೋಗಿದ್ದು ಎಲ್ಲಿಗೆ? ಚಾರ್ಜ್​ಶೀಟ್​ನಲ್ಲಿ ಬಯಲಾಯ್ತು ‘ಡಿ ಗ್ಯಾಂಗ್​’ನ ಮತ್ತೊಂದು ಕರಾಳ ಮುಖ

Spread the love

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸ್ಸೇಜ್​ ಮಾಡಿದ ಎಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿ ಜೈಲು ಪಾಲಾಗಿರುವ ನಟ ದರ್ಶನ್​ ಮತ್ತು ಗ್ಯಾಂಗ್​ನ ಕರಾಳ ಕೃತ್ಯಗಳು ದಿನ ಕಳೆದಂತೆ ಒಂದೊಂದೇ ಬಯಲಾಗುತ್ತಿದೆ.

ನಿಜಜೀವನದಲ್ಲಿ ಮಾದರಿಯಾಗಬೇಕಿದ್ದ ಸ್ಟಾರ್​ ನಟನ ಈ ಕೃತ್ಯ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದು, ಚಾರ್ಜ್​ಶೀಟ್​ನಲ್ಲಿ ಪೊಲೀಸರು ಉಲ್ಲೇಖಿಸಿರುವ ಆಘಾತಕಾರಿ ಅಂಶಗಳು ಡಿ ಗ್ಯಾಂಗ್​ನ ಕರಾಳ ಮುಖವನ್ನು ಹೊರಜಗತ್ತಿಗೆ ಪರಿಚಯಿಸುತ್ತಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್​ ಗೆಳತಿ ಪವಿತ್ರಾ ಗೌಡ ಪರಪ್ಪನ ಅಗ್ರಹಾರದಲ್ಲಿ ದಿನ ದೂಡುತ್ತಿದ್ದು, ಕೋರ್ಟ್​ ಕೆಲ ದಿನಗಳ ಹಿಂದೆ ಇವರ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಇದೀಗ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್​ಶೀಟ್​ ಸಲ್ಲಿಸಿದ್ದು, ಅರೋಪಿಗಳಿಗೆ ಮತ್ತಷ್ಟು ಟೆನ್ಷನ್​ ಜಾಸ್ತಿ ಆಗುವಂತೆ ಮಾಡಿದೆ.

ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಸ್ವಾಮಿ ಹತ್ಯೆಯ ಬಳಿಕ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್​ ಮನೆಗೆ ತೆರಳಿದ್ದು, ಮಾರನೇ ದಿನ ಸಂಜೆ ಡೆವಿಲ್​ ಶೂಟಿಂಗ್​ ನಿಮಿತ ಮೈಸೂರಿಗೆ ಹೊರಟಿದ್ದಾರೆ. ಇತ್ತ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಹತ್ಯೆ ನಡೆದ ಮಾರನೇ ದಿನ ಬ್ಯೂಟಿ ಪಾರ್ಲರ್​ಗೆ ಹೋಗಿದ್ದರಂತೆ. ಈ ಬಗ್ಗೆ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದು, ಈ ಬಗ್ಗೆ ಸಾಕ್ಷ್ಯಧಾರಗಳನ್ನು ಒದಗಿಸಿದ್ದಾರೆ.


Spread the love

About Laxminews 24x7

Check Also

ಗೌರವ ಡಾಕ್ಟರೇಟ್ ಹಿಂಪಡೆಯಿರಿ: ಸಚಿವ ಸತೀಶ್ ಜಾರಕಿಹೊಳಿ ಪತ್ರ

Spread the loveಗೌರವಾನ್ವಿತ ಉಪ ಕುಲಪತಿರವರೇ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ