Breaking News

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು

Spread the love

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದ್ದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ.

ಶಾಸಕರಾದ ಮುನಿರತ್ನ, ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಸಚಿವರಾಗುವುದು ಪಕ್ಕಾ ಆಗುತ್ತಿದ್ದಂತೆ, ದೆಹಲಿಯಲ್ಲಿ ಲಾಬಿ ಶುರುವಾಗಿದೆ.ಶುಕ್ರವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರ್. ಅಶೋಕ್ ದೆಹಲಿಗೆ ಹಾರಿದ್ದಾರೆ. ಬಿಜೆಪಿ ವರಿಷ್ಠ ಜೆ.ಪಿ. ನಡ್ಡಾ ಕೂಡ ನಾಳಿನ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಅಲ್ಲಿ ಭೇಟಿ ಮಾಡುವ ಉದ್ದೇಶ ಹೊಂದಿದ್ದಾರೆ.

ಇನ್ನೊಂದೆಡೆ, ವಲಸಿಗ ತಂಡದ ಅಧಿನಾಯಕರಂತೆ ಬಿಂಬಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರ ರಚನೆಗೆ ಕಾರಣರಾದವರ ಪರ ನಿಂತಿದ್ದಾರೆ. ಜೆ.ಪಿ. ನಡ್ಡಾ ಭೇಟಿಗೆ ದಿನವಿಡಿ ಕಾದಿರುವ ಜಾರಕಿಹೊಳಿಗೆ ಇನ್ನೂ ಬುಲಾವ್ ಸಿಕ್ಕಿಲ್ಲ. ಒಂದು ವೇಳೆ ಶ್ರೀಮಂತ ಪಾಟೀಲ್‍ರನ್ನು ಸಂಪುಟದಿಂದ ಕೈಬಿಟ್ಟರೆ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಮುಂದೆ ಪ್ರಸ್ತಾಪ ಮುಂದಿಡಲು ಬಯಸಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ, ಸಿ.ಪಿ. ಯೋಗೇಶ್ವರ್ ಅವರನ್ನು ದಿಢೀರನೆ ದೆಹಲಿಗೂ ಕರೆಸಿಕೊಂಡಿರುವುದು ಕುತೂಹಲ ಮೂಡಿಸಿದೆ. ಇವತ್ತು ಆಪ್ತೇಷ್ಠ ಸಚಿವರ ಸಭೆ ಕರೆದಿದ್ದ ಸಿಎಂ ಯಡಿಯೂರಪ್ಪ, ಚಾಮರಾಜನಗರದಿಂದ ಬರೋದು ತಡವಾಗಿದ್ದರಿಂದ ಕೊನೆ ಕ್ಷಣದಲ್ಲಿ ಸಭೆ ರದ್ದುಗೊಳಿಸಿದ್ದಾರೆ. ಆದರೆ ಸಚಿವರಾದ ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ,ಜೆ.ಸಿ. ಮಾಧುಸ್ವಾಮಿ, ಬಿ.ಸಿ.ಪಾಟೀಲ್ ಸೇರಿ ಹಲವರು ಸಂಜೆ ಸಿಎಂ ಭೇಟಿ ಮಾಡಿದರು.

ಕ್ಯಾಬಿನೆಟ್‌ ಸಭೆ:
ಸಂಪುಟ ವಿಸ್ತರಣೆಯ ಗೊಂದಲದ ಮಧ್ಯೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಸಂಪುಟ ಸಭೆ ಕರೆದಿದ್ದಾರೆ. ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಆರ್. ಅಶೋಕ್ ಹಾಗೂ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಇರುವ ಕಾರಣ ನಾಳಿನ ಸಭೆಯಲ್ಲಿ ಭಾಗಿಯಾಗೋದು ಅನುಮಾನವಾಗಿದೆ. ನಾಳೆ ಸಂಪುಟ ಸಭೆ ಬಳಿಕ ಸಿಎಂ ಯಡಿಯೂರಪ್ಪ ಖುದ್ದಾಗಿ ಸುದ್ದಿ ನಡೆಸಲಿದ್ದು, ಏನ್ ಹೇಳ್ತಾರೋ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮನೆ ಮಾಡಿದೆ.

ಈ ಬೆಳವಣಿಗೆಗಳ ಮಧ್ಯೆ, ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಸಚಿವೆ ಶಶಿಕಲಾ ಜೊಲ್ಲೆ, ನಾನ್ಯಾಕೆ ಸಚಿವೆ ಸ್ಥಾನ ತ್ಯಾಗ ಮಾಡಲಿ. ಸಂಪುಟದಲ್ಲಿ ಇರೋದು ನಾನೊಬ್ಬಳೇ ಸಚಿವೆ ಅಂತ ಸೆಡ್ಡು ಹೊಡೆದಿದ್ದಾರೆ. ನಿನ್ನೆಯಷ್ಟೇ ಸುತ್ತೂರು ಶ್ರೀಗಳ ಎದುರು ಸಿಎಂ ಯಡಿಯೂರಪ್ಪ ವಿರುದ್ಧ ಸಂಸದ ಶ್ರೀನಿವಾಸ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶ್ರೀನಿವಾಸ್ ಪ್ರಸಾದ್ ಅಳಿಯ ಹಾಗೂ ನಂಜನಗೂಡು ಶಾಸಕ ಹರ್ಷವರ್ಧನ್, ಮೈಸೂರು ಭಾಗದ ದಲಿತ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಅಂತಾ ಆಗ್ರಹಿಸಿದ್ದಾರೆ. ಇವೆಲ್ಲದರ ಮಧ್ಯೆ, ನಾಳೆ ಸಂಸದರ ಅನೌಪಚಾರಿಕ ಸಭೆಯನ್ನು ಸಿಎಂ ಕರೆದಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ