Breaking News

ರಾಜ್ಯದ ‘ವಿವಿಧ ಹಗರಣ’ಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಸಮಿತಿ ರಚಿಸಿ ಸಿಎಂ ಆದೇಶ

Spread the love

ರಾಜ್ಯದ ‘ವಿವಿಧ ಹಗರಣ’ಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಸಮಿತಿ ರಚಿಸಿ ಸಿಎಂ ಆದೇಶ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಲಾಗಿತ್ತು. ಈಗ ಮುಂದುವರೆದ ಭಾಗವಾಗಿ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದಾರೆ.

 

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಸಚಿವರನ್ನ ಒಳಗೊಂಡ ಸಮಿತಿ ರಚಿಸಿ ಆದೇಶಿಸಲಾಗಿದೆ ಎಂದಿದ್ದಾರೆ.

ವಿವಿಧ ಹಗರಣಗಳ ಪ್ರಗತಿ, ಸಮನ್ವಯ ಸಮಿತಿಯ ಅಧ್ಯಕ್ಷರನ್ನಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ನೇಮಿಸಲಾಗಿದೆ. ಸದಸ್ಯರನ್ನಾಗಿ ಸಚಿವ ಹೆಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಅವರನ್ನು ನೇಮಕ ಮಾಡಲಾಗಿದೆ.

ಈ ಸಚಿವರ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತಮಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿದ್ದಾರೆ.


Spread the love

About Laxminews 24x7

Check Also

ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ ‌ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘಗಳ ಮಹಾಸಂಘ ಪ್ರತಿಭಟನೆ

Spread the loveಬೆಳಗಾವಿ ;ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರ ಹಾಗೂ ಭ್ರಷ್ಟಾಚಾರದ ಸಂಪೂರ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ