Breaking News

ಸಿ.ಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ: ದಿನೇಶ್ ಗುಂಡೂರಾವ್

Spread the love

ಬೆಳಗಾವಿ: ‘ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿ.ಎಂ ಸ್ಥಾನಕ್ಕೆ ರೇಸ್‌ನಲ್ಲಿ ಯಾರೂ ಇಲ್ಲವೇ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದರು.

‘ದೀಪಾವಳಿ ನಂತರ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದ ಅವರು, ‘ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ.

ಹಾಗಾಗಿ ಸರ್ಕಾರ ಬೀಳಿಸಲು, ಒಡೆಯಲು ಮತ್ತು ಆಪರೇಷನ್‌ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಬದಲಿಗೆ ಕಾಂಗ್ರೆಸ್‌ ಸರ್ಕಾರ ಬೀಳಿಸಲು ಯತ್ನಿಸುವುದೇ ಅವರ ಕೆಲಸವಾಗಿದೆ’ ಎಂದು ಟೀಕಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ