Breaking News

ಸೆ.15 ರಂದು ಕಿತ್ತೂರು ಚನ್ನಮ್ಮ ಪುತ್ಥಳಿ ಅನಾವರಣ

Spread the love

ಸಿಂಧನೂರು: ‘ನಗರದಲ್ಲಿ ಕಿತ್ತೂರುರಾಣಿ ಚನ್ನಮ್ಮ ವೃತ್ತ ಹಾಗೂ ನೂತನ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಸೆ.15 ರಂದು ನಡೆಯಲಿದೆ’ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು.

ಈ ಬಗ್ಗೆ ಬುಧವಾರ ಹೇಳಿಕೆ ನೀಡಿರುವ ಅವರು, ‘ಸೆ.15 ರಂದು ಬೆಳಿಗ್ಗೆ ನಗರದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಅಂಬಾದೇವಿ ದೇವಸ್ಥಾನದಿಂದ ಚನ್ನಮ್ಮ ವೃತ್ತದವರೆಗೆ ಅದ್ದೂರಿ ಮೆರವಣಿಗೆ ನಡೆಯಲಿದೆ.

ಮಧ್ಯಾಹ್ನ 12 ಗಂಟೆಗೆ ವಾಸವಿ ಕಲ್ಯಾಣ ಮಂಟಪದಲ್ಲಿ ಬಹಿರಂಗ ಕಾರ್ಯಕ್ರಮ ಜರುಗಲಿದೆ’ ಎಂದರು.

‘ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರ ಪೀಠದ ವಚನಾನಂದ ಸ್ವಾಮೀಜಿ, ಮನಗೊಳಿ ಅಭಿನವ ಸಂಗನಬಸವಸ್ವಾಮಿ ಹಿರೇಮಠ, ಯದ್ದಲದೊಡ್ಡಿಯ ಮಹಾಲಿಂಗ ಸ್ವಾಮೀಜಿ, ಕರಿಬಸವನಗರದ ಸೋಮನಾಥ ಶಿವಾಚಾರ್ಯರು, ವೆಂಕಟಗಿರಿ ಕ್ಯಾಂಪ್‌ನ ದ್ದರಾಮೇಶ್ವರ ಶರಣರು, ಜಂಗಮರಹಳ್ಳಿಯ ಚಂದ್ರಮೌನೇಶ ತಾತನವರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿವರು. ಸಚಿವೆ ಲಕ್ಷ್ಮಿ ಆರ್.ಹೆಬ್ಬಾಳ್ಕರ್, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಹಂಪನಗೌಡ ಬಾದರ್ಲಿ, ಆರ್.ಬಸನಗೌಡ ತುರವಿಹಾಳ, ಸಂಸದ ಕೆ.ರಾಜಶೇಖರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಪಿ.ಪಾಟೀಲ ಸೇರಿದಂತೆ ಅನೇಕ ಹಾಲಿ-ಮಾಜಿ ಜನಪ್ರತಿನಿಧಿಗಳು, ಸಮುದಯದ ಮುಖಂಡರು, ಗಣ್ಯರು ಭಾಗಿಯಾಗಲಿದ್ದಾರೆ’ ಎಂದು ಮಾಹಿತಿ ನೀಡಿದರು.

ಮುಖಂಡ ಕಲ್ಯಾಣಪ್ಪ ಹಿರೇಗೌಡ್ರು ರೌಡಕುಂದಾ, ಬಿಜೆಪಿ ಮುಖಂಡ ಸಿದ್ರಾಮೇಶ ಮನ್ನಾಪುರ, ಗೌರವಾಧ್ಯಕ್ಷ ವೀರಭದ್ರಪ್ಪ ಗಸ್ತಿ, ಮುಖಂಡರಾದ ನಾಗರಾಜ ಗಸ್ತಿ, ಶಿವಕುಮಾರ ಕುರುಕುಂದಾ, ನಾಗಪ್ಪ ಹಿರೇಗೌಡ್ರು, ವಿರೂಪಕ್ಷಪ್ಪ ಮಾಲಿಗೌಡ, ಉಗ್ರಾಣ ಶರಣಪ್ಪ ಉಪಸ್ಥಿತರಿದ್ದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ