Breaking News

ಶಾಲೆ ಅಭಿವೃದ್ಧಿಗೆ ಶ್ರಮ ಅಗತ್ಯ: ಶರೀಫ್‌ ಮೊಕಾಶಿ

Spread the love

ಬೈಲಹೊಂಗಲ: ‘ಮೌಲಾನಾ ಅಬುಲ್‍ ಕಲಾಂ ಆಝಾದ್‌ ಹೈಸ್ಕೂಲ್ ಉಳಿಸಿ, ಬೆಳೆಸುವಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಅತ್ಯುತ್ತಮ ಕಾರ್ಯ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಕರ್ನಾಟಕ ಉರ್ದು ಅಕಾಡೆಮಿ ನಿರ್ದೇಶಕ ಶರೀಫ್‌ ಮೊಕಾಶಿ ಹೇಳಿದರು.

ಪಟ್ಟಣದ ಈದ್ಗಾ ಮೈದಾನದಲ್ಲಿರುವ ಮೌಲಾನಾ ಅಬುಲ್‍ ಕಲಾಂ ಆಝಾದ್ ಪ್ರೌಢಶಾಲೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆದ ವಾರ್ಷಿಕ ಸಭೆ ಹಾಗೂ ಮುಸ್ಲಿಂ ಸಮಾಜದ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

ಸಮಿತಿಯವರ ವೈಯಕ್ತಿಕ ಹಿತಾಸಕ್ತಿಯಿಂದ ಶಾಲೆಯ ಅಭಿವೃದ್ಧಿ ಕುಂಠಿತವಾಗಿದೆ. ಹಳೆಯ ವಿದ್ಯಾರ್ಥಿಗಳ ಸಂಘ ತನು, ಮನ, ಧನದಿಂದ ಶಾಲೆಯ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮಿಸುವ ಅಗತ್ಯ ಇದೆ. ನ್ಯಾಯಾಲಯದಲ್ಲಿರುವ ಪ್ರಕರಣವನ್ನು ಎರಡು ಸಮಿತಿಯವರು ಹಿಂಪಡೆಯಬೇಕು. ಶಿಕ್ಷಕರಿಲ್ಲದೆ ಮಕ್ಕಳಿಗೆ ತೊಂದರೆ ಉಂಟಾಗುತ್ತಿದ್ದು, ಶೀಘ್ರ ಶಿಕ್ಷಕರ ನೇಮಕ, ಪಿಯುಸಿ ಪ್ರಾರಂಭಿಸಲು ಅನುಮತಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸ ನಡೆಯಬೇಕಿದೆ. ಇದಕ್ಕೆ ತಡೆ ಒಡ್ಡುತ್ತಿರುವ ಕಮಿಟಿಗಳು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸಾಜೀದ ಬಾಬಣ್ಣವರ, ನಿರ್ದೇಶಕ ರಫೀಕ ದೇಶನೂರ, ನಜೀರ ತೊಲಗಿ ಮಾತನಾಡಿ, ‘ಹಳೆಯ ವಿದ್ಯಾರ್ಥಿಗಳ ಸಂಘ ಯಾವುದೇ ಕಮಿಟಿ ಮಾಡುವುದಿಲ್ಲ. ನಮ್ಮ ಮುಖ್ಯ ಉದ್ದೇಶ ಶಾಲೆಯ ಅಭಿವೃದ್ಧಿ. ಈ ದಿಸೆಯಲ್ಲಿ ಎಲ್ಲ ಹಳೆಯ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿದ್ದೇವೆ’ ಎಂದರು.

ಸಮಾಜ ಮುಖಂಡರು ಮಾತನಾಡಿ, ಕಮಿಟಿಯ 11 ಜನ ಸದಸ್ಯರಲ್ಲಿ ಅಧ್ಯಕ್ಷ, ಇಬ್ಬರು ಸದಸ್ಯರು ಮಾತ್ರ ರಾಜೀನಾಮೆ ನೀಡಿದ್ದು, ಅಂಜುಮನ್ ಎ-ಇಸ್ಲಾಂ ಸೂಕ್ತ ನಿರ್ಧಾರ ಮಾಡುವವರೆಗೂ ಶಾಂತತೆಯಿಂದ ಇರಬೇಕು ಎಂದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ