Breaking News

ದರ್ಶನ್​ ಬೆರಳ ಸನ್ನೆ ಹಿಂದಿರುವ ಸೀಕ್ರೆಟ್​ ಇದೇನಾ?; ಫ್ಯಾನ್ಸ್​ ಹೇಳ್ತಿರುವ ವಿಷಯ ಹೀಗಿದೆ ನೋಡಿ..

Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್​ ಸೇರಿ 17 ಮಂದಿ ಆರೋಪಿಗಳು ಪ್ರಸ್ತುತ ಒಂದೊಂದು ಜೈಲಿನಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದ ನಟ ದರ್ಶನ್​​​ನನ್ನು ನಿಯಮ ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು.

ಬಳ್ಳಾರಿ ಜೈಲಿನಲ್ಲಿ ಇರಲು ನನಗೆ ಕಷ್ಟವಾಗುತ್ತಿದೆ ಎಂದು ನಟ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ದರ್ಶನ್​ ಅವರು ಇತ್ತೀಚೆಗೆ ನಡೆದುಕೊಂಡಿರುವ ರೀತಿಗೆ ಅನೇಕರು ಆಕ್ರೋಶ ವ್ಯಕ್ತಪಡಿಸಿದರೆ ಅವರ ಫ್ಯಾನ್ಸ್​​ ಅದಕ್ಕೊಂದು ವಿಶ್ಲೇಷಣೆ ನೀಡುತ್ತಿದ್ದಾರೆ.

ಇತ್ತೀಚೆಗೆ ದರ್ಶನ್​ ಪತ್ನಿ ವಿಜಯಲಕ್ಷ್ಮಿ, ಅವರ ಸಹೋದರ ದಿನಕರ್​ ತೂಗುದೀಪ ಮತ್ತು ವಕೀಲರು ಬಳ್ಳಾರಿ ಜೈಲಿಗೆ ಹೋಗಿದ್ದರು. ಅವರ ಭೇಟಿಗೆ ಸಂಜೆ 4.15ಕ್ಕೆ ದರ್ಶನ್​ನನ್ನು ವಿಶೇಷ ಭದ್ರತಾ ಕೊಠಡಿಯಿಂದ ಜೈಲಿನ ಸಂದರ್ಶಕರ ಕೊಠಡಿಗೆ ಪೊಲೀಸರು ಕರೆ ತಂದಿದ್ದಾರೆ. ವಿಶೇಷ ಭದ್ರತಾ ಕೊಠಡಿಯಿಂದ ಸಂದರ್ಶಕರ ಕೊಠಡಿಗೆ ತೆರಳುತ್ತಿದ್ದ ವೇಳೆ ಕಾರಾಗೃಹದ ಗೇಟಿನ ಕಡೆ ನೋಡುತ್ತಾ ದರ್ಶನ್​ ತಮ್ಮ ಎರಡು ಕೈಗಳಲ್ಲಿ ಮಧ್ಯದ ಬೆರಳನ್ನು ತೋರುಸುತ್ತಾ ಸಾಗಿದ್ದಾರೆ. ನಟನ ಈ ನಡೆ ಸದ್ಯ ಭಾರೀ ಚರ್ಚೆಯಾಗುತ್ತಿದೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ