Home / ಜಿಲ್ಲೆ / ಬೆಂಗಳೂರು / ಸೀಮಿತ ಆದಾಯದ ನಡುವೆ ಹೊಸ ಬಜೆಟ್ ಮಂಡನೆಗಾಗಿ ಈಗಾಗಲೇ ಹಣಕಾಸು ಇಲಾಖೆ ಪೂರ್ವಸಿದ್ಧತೆ ಪ್ರಾರಂಭ

ಸೀಮಿತ ಆದಾಯದ ನಡುವೆ ಹೊಸ ಬಜೆಟ್ ಮಂಡನೆಗಾಗಿ ಈಗಾಗಲೇ ಹಣಕಾಸು ಇಲಾಖೆ ಪೂರ್ವಸಿದ್ಧತೆ ಪ್ರಾರಂಭ

Spread the love

ಬೆಂಗಳೂರು: ಸೀಮಿತ ಆದಾಯದ ನಡುವೆ ಹೊಸ ಬಜೆಟ್ ಮಂಡನೆಗಾಗಿ ಈಗಾಗಲೇ ಹಣಕಾಸು ಇಲಾಖೆ ಪೂರ್ವಸಿದ್ಧತೆ ಪ್ರಾರಂಭಿಸಿದೆ.ಆರ್ಥಿಕ ಸಂಕಷ್ಟದ ನಡುವೆ ಸಿಎಂ ಯಡಿಯೂರಪ್ಪ, 2021-22ನೇ ಸಾಲಿನ ಆಯವ್ಯಯ ಮಂಡಿಸಬೇಕಾಗಿದೆ.

ತೆರಿಗೆ ಸಂಗ್ರಹದಲ್ಲಿನ ಕೊರತೆ, ಸೀಮಿತ ಆದಾಯ ಮೂಲ ಸರ್ಕಾರದ ಕೈಯನ್ನು ಕಟ್ಟಿ ಹಾಕಿದೆ. ಹೀಗಾಗಿ 2021-22ನೇ ಸಾಲಿನ ಆಯವ್ಯಯ ಸಿಎಂಗೆ ಕಬ್ಬಿಣದ ಕಡಲೆಯಾಗಿದೆ. ಒಂದೆಡೆ ಜನಪ್ರಿಯ ಯೋಜನೆಗಳು ಕೊಡುವ ಅಗತ್ಯವೂ ಇದೆ, ಇನ್ನೊಂದೆಡೆ ಪ್ರಮುಖ ಇಲಾಖೆಗಳಿಗೆ ಅನುದಾನ ಕಡಿತಗೊಳಿಸು ಹಾಗಿಲ್ಲ. ಈ ಎಲ್ಲಾ ಅನಿವಾರ್ಯತೆಗಳ ಮಧ್ಯೆ
ಯಾವ ರೀತಿ ಬಜೆಟ್ ಮಂಡಿಸಬೇಕು ಎಂಬುದು ಬಿಜೆಪಿ ಸರ್ಕಾರಕ್ಕೆ ಸವಾಲಿನ ಸಂಗತಿಯಾಗಿದೆ.

ಈಗಾಗಲೇ ಎಲ್ಲಾ ಇಲಾಖೆಗಳಿಗೆ ಅಂದಾಜು ಅನುದಾನ, ಖರ್ಚು ವೆಚ್ಚಗಳ ವಿವರಗಳ ಲೆಕ್ಕಾಚಾರ ನೀಡುವಂತೆ ನಿರ್ದೇಶನ ನೀಡಿದೆ.
ಇಲಾಖಾ ಮುಖ್ಯಸ್ಥರು ಈ ಅಂದಾಜುಗಳನ್ನು ಪರಿಶೀಲಿಸಿ ಕ್ರೋಢೀಕೃತ ಅಂದಾಜುಗಳನ್ನು ತಮ್ಮ ಷರಾದೊಂದಿಗೆ ಸಚಿವಾಲಯದ ಆಂತರಿಕ ಆರ್ಥಿಕ ಸಲಹೆಗಾರರ ಮುಖಾಂತರ, ನಿಗದಿಪಡಿಸಿದ ದಿನಾಂಕಗಳಿಗಿಂತ ಮುಂಚಿತವಾಗಿ ಆರ್ಥಿಕ ಇಲಾಖೆಗೆ ಕಳುಹಿಸಿಕೊಡುವಂತೆ ಸುತ್ತೋಲೆ ಹೊರಡಿಸಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ