Breaking News

ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ

Spread the love

ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ.

ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ