Breaking News

ಬೆಳಗಾವಿಯವರೆಗೆ ಸೇವೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ಶೆಟ್ಟರ್ ಪತ್ರ

Spread the love

ಬೆಳಗಾವಿ: ‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಿ’ ಎಂದು ಸಂಸದ ಜಗದೀಶ ಶೆಟ್ಟರ್‌ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಭಾನುವಾರ ಪತ್ರ ಬರೆದಿದ್ದಾರೆ.

‘ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸೇವೆಯನ್ನು ಬೆಳಗಾವಿಯವರೆಗೆ ವಿಸ್ತರಿಸಬೇಕೆಂಬ ಜನರ ಬೇಡಿಕೆ ಬಹಳ ದಿನಗಳಿಂದ ಇದೆ.

ಈ ಹಿಂದೆ ಬೆಳಗಾವಿಯವರೆಗೆ ಕೈಗೊಂಡಿದ್ದ ರೈಲಿನ ಪ್ರಾಯೋಗಿಕ ಸಂಚಾರವೂ ಯಶಸ್ವಿಯಾಗಿತ್ತು. ಆದರೆ, ತಾಂತ್ರಿಕ ಕಾರಣ ನೀಡಿದ ರೈಲ್ವೆ ಅಧಿಕಾರಿಗಳು ಸಂಚಾರ ಆರಂಭಿಸಿಲ್ಲ. ಈ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಬೇಕು’ ಎಂದು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ