Breaking News

ಲೋಕ ಅದಾಲತ್‌: 400 ಬಾಕಿ ಪ್ರಕರಣ ಇತ್ಯರ್ಥ

Spread the love

ವದತ್ತಿ: ಇಲ್ಲಿನ ನ್ಯಾಯಾಲಯ ಸಂಕೀರ್ಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು.

ಅದಾಲತ್‌ನಲ್ಲಿ ಬಾಕಿ ಇರುವ 1388 ಪ್ರಕರಣಗಳನ್ನು ಕೈಗೆತ್ತಿಕೊಂಡು 400 ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿ ಸುಮಾರು ₹ 94 ಲಕ್ಷದಷ್ಟು ವಸೂಲಾತಿ ಮಾಡಲಾಯಿತು.

3440 ವ್ಯಾಜ್ಯಪೂರ್ವ ಪ್ರಕರಣಗಳ ಪೈಕಿ 702ನ್ನು ಇತ್ಯರ್ಥಪಡಿಸಿ ಸುಮಾರು ₹ 1.15 ಕೋಟಿ ವಸೂಲಾತಿ ಮಾಡಲಾಗಿದೆ ಎಂದು ನ್ಯಾಯಾಧೀಶ ಶಶಿಧರ ಎಂ. ಗೌಡ ತಿಳಿಸಿದರು.

ಲೋಕ ಅದಾಲತ್‌: 400 ಬಾಕಿ ಪ್ರಕರಣ ಇತ್ಯರ್ಥ

ಈ ವೇಳೆ 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಸಿದ್ರಾಮ ರೆಡ್ಡಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಎನ್. ಮುತ್ತಿನ, ಎ.ಎ.ನೇಸರಿಕರ, ಎಂ.ಕೆ.ನಂದೆನ್ನವರ, .ಪಿ.ಎಂ. ಉಪ್ಪಾರ, ಆರ್.ಎಚ್. ಭಾವಾಖಾನ, ಯು.ಎಂ. ನಾಗನೂರು, ವಿ.ವಿ.ಅಂಗಡಿ, ಎಸ್.ಎಸ್. ಹಿರೇಮಠ ಭಾಗವಹಿಸಿದ್ದರು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ