Breaking News

ಮೂಡದ ಜಾಗೃತಿ; ಜೀವಜಲ ಕಲುಷಿತ

Spread the love

ಬೆಳಗಾವಿ: ನಗರದ ಜಲಮೂಲಗಳನ್ನು ರಕ್ಷಣೆ ಮಾಡುವಲ್ಲಿ ಈ ವರ್ಷವೂ ಮಹಾನಗರ ಪಾಲಿಕೆ ಹಿಂದೆ ಬಿದ್ದಿದೆ. ನಗರದಲ್ಲಿ ಎಲ್ಲೆಂದರಲ್ಲಿ ಪಿಒಪಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಈಗಾಗಲೇ ಐದು ದಿನಗಳ ಗಣಪತಿಗಳನ್ನು ವಿಸರ್ಜನೆಯೂ ಮಾಡಲಾಗಿದೆ. ಈ ಬಾರಿಯೂ ನದಿ, ಹಳ್ಳ, ಬಾವಿ, ಕೆರೆಗಳಲ್ಲಿಯೇ ವಿಸರ್ಜನೆ ಮಾಡಿದ್ದು ಬಹುಪಾಲು ಕಡೆ ಕಂಡುಬಂದಿದೆ.

ಬೆಳಗಾವಿ: ಮೂಡದ ಜಾಗೃತಿ; ಜೀವಜಲ ಕಲುಷಿತ

‘ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಿ. ಪರಿಸರ ಸ್ನೇಹಿ ಮೂರ್ತಿಗಳನ್ನು ನಿರ್ದಿಷ್ಟವಾದ ಹೊಂಡಗಳಲ್ಲೇ ವಿಸರ್ಜಿಸಿ. ಒಂದುವೇಳೆ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ)ನಿಂದ ತಯಾರಿಸಿದ್ದ ಮೂರ್ತಿಗಳಿದ್ದರೆ, ಸಂಚಾರ ವಾಹನಗಳ ಟ್ಯಾಂಕ್‌ನಲ್ಲಿ ವಿಸರ್ಜಿಸಿ’ ಎಂದು ಮಹಾನಗರ ಪಾಲಿಕೆ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಜಾಗೃತಿ ಮೂಡಿಸುತ್ತಲೇ ಇದ್ದಾರೆ. ಆದರೆ, ಫಲಿತಾಂಶ ಮಾತ್ರ ಅಷ್ಟಕ್ಕಷ್ಟೇ.

‘ಗಣೇಶೋತ್ಸವಕ್ಕೆ ಮಂಗಳವಾರ ತೆರೆಬೀಳಲಿದೆ. ತಮ್ಮ ಮನೆಗಳಲ್ಲಿ ಗಣಪ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಿದ ಹಲವರು, ಉತ್ಸವದ 11ನೇ ದಿನದಂದು ವಿಸರ್ಜಿಸಲಿದ್ದಾರೆ. ಅಂದಾದರೂ ಪರಿಸರ ಸ್ನೇಹಿ ಹೆಜ್ಜೆ ಇರಿಸಬೇಕು’ ಎನ್ನುವ ಜನಾಗ್ರಹ ವ್ಯಕ್ತವಾಗಿದೆ.


Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ