Breaking News

ಅಕ್ರಮ ಆಸ್ತಿ ಗಳಿಕೆ ಪ್ರಕರಣ : `DCM ಡಿ.ಕೆ.ಶಿವಕುಮಾರ್’ ಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್!

Spread the love

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.

 

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್​ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್​ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.


Spread the love

About Laxminews 24x7

Check Also

ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ ಆಯೋಗ ಆದೇಶ ನೀಡಿದೆ.

Spread the loveಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ಹೆಚ್ಚಳ ಮಾಡಿ ರಾಷ್ಟ್ರೀಯ ವೈದ್ಯಕೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ