Breaking News

ಗಣೇಶ ವಿಸರ್ಜನೆಯ ಅದ್ದೂರಿ ಮೆರವಣಿಗೆ: ಈದ್‌ ರ‍್ಯಾಲಿ ಮುಂದಕ್ಕೆ

Spread the love

ಬೆಳಗಾವಿ: ಗಣೇಶ ಮೂರ್ತಿಗಳ ವಿಸರ್ಜನೆಯ ಅದ್ದೂರಿ ಮೆರವಣಿಗೆಗೆ ತೊಡಕಾಗದಿರಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯು ಸಮಸ್ಯೆ ಆಗದಿರಲಿ ಎಂಬ ಉದ್ದೇಶದಿಂದ ಸೋಮವಾರದ ಈದ್ ಮಿಲಾದ್ ಮೆರವಣಿಗೆಯನ್ನು ಮುಸ್ಲಿಮರು ಸೆಪ್ಟೆಂಬರ್ 22ಕ್ಕೆ ಮುಂದೂಡಿದರು. ಉಳಿದಂತೆ ಇತರ ಧಾರ್ಮಿಕ ಕಾರ್ಯಗಳಲ್ಲಿ ಸಂಭ್ರಮದಿಂದ ಪಾಲ್ಗೊಂಡರು.

ಬೆಳಗಾವಿ | ಗಣೇಶ ವಿಸರ್ಜನೆಯ ಅದ್ದೂರಿ ಮೆರವಣಿಗೆ: ಈದ್‌ ರ‍್ಯಾಲಿ ಮುಂದಕ್ಕೆ

‘ಬೆಳಗಾವಿಯ ಗಣೇಶೋತ್ಸವ ದೇಶದಲ್ಲೇ ಪ್ರಸಿದ್ಧ. ಮೊದಲು ಅದು ಸಂಭ್ರಮದಿಂದ ನೆರವೇರಲಿ. ಸೆಪ್ಟೆಂಬರ್ 22ರಂದು ನಾವು ಈದ್‌-ಮಿಲಾದ್‌ ಮೆರವಣಿಗೆ ಮಾಡಲು ಇಸ್ಲಾಂ ಧರ್ಮಗುರುಗಳು ಮತ್ತು ಮುಸ್ಲಿಮರೆಲ್ಲ ಸೇರಿ ನಿರ್ಧರಿಸಿದೆವು. ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಮುಸ್ಲಿಮರೂ ಪಾಲ್ಗೊಳ್ಳುತ್ತೇವೆ. ಈದ್‌ ಮೆರವಣಿಗೆಗೆ ಹಿಂದೂಗಳನ್ನು ಆಹ್ವಾನಿಸಿದ್ದೇವೆ’ ಎಂದು ಅಂಜುಮನ್‌-ಇ-ಇಸ್ಲಾಂ ಸಂಸ್ಥೆ ಅಧ್ಯಕ್ಷರೂ ಆಗಿರುವ ಶಾಸಕ ಆಸೀಫ್‌ ಸೇಠ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಮುಸ್ಲಿಮರ ಈ ನಿರ್ಣಯ ಪ್ರಶಂಸನೀಯ. ಈದ್‌-ಮಿಲಾದ್‌ ಮೆರವಣಿಗೆಯಲ್ಲಿ ನಾವೂ ಭಾಗವಹಿಸಿ, ಭಾವೈಕ್ಯತೆ ಮೆರೆಯುತ್ತೇವೆ’ ಎಂದು ಸಾರ್ವಜನಿಕ ಗಣೇಶೋತ್ಸವ ಮಹಾಮಂಡಳಿ ಮುಖಂಡ ವಿಕಾಸ ಕಲಘಟಗಿ ಹೇಳಿದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ