Home / ಜಿಲ್ಲೆ / ಬೆಂಗಳೂರು / ರಮೇಶ್ ಜಾರಕಿಹೊಳಿ ಮತ್ತು ನಾನು 20 ವರ್ಷದ ಸ್ನೇಹಿತರು ಅವರು ನನ್ನ ಪರವಾಗಿ ಹೈಕಮಾಂಡ್ ನಾಯಕರ ಬಳಿ ಮಾತನಾಡುತ್ತಿದ್ದಾರೆ ಸಿ.ಪಿ.ಯೋಗೇಶ್ವರ್

ರಮೇಶ್ ಜಾರಕಿಹೊಳಿ ಮತ್ತು ನಾನು 20 ವರ್ಷದ ಸ್ನೇಹಿತರು ಅವರು ನನ್ನ ಪರವಾಗಿ ಹೈಕಮಾಂಡ್ ನಾಯಕರ ಬಳಿ ಮಾತನಾಡುತ್ತಿದ್ದಾರೆ ಸಿ.ಪಿ.ಯೋಗೇಶ್ವರ್

Spread the love

ಬೆಂಗಳೂರು, ನ.27- ಸರ್ಕಾರ ರಚನೆ ವೇಳೆ ನನ್ನ ಪಾತ್ರ ಏನು ಎಂಬುದು ಹೈಕಮಾಂಡ್ ನಾಯಕರಿಗೆ ಗೊತ್ತಿದೆ. ಹಾಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿರುವವರನ್ನು ಗಮನಿಸಿದ್ದೇನೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದರು.

ಇಂದು ಬಿ.ಎಲ್.ಸಂತೋಷ್ ಅವರನ್ನು ಭೇಟಿ ಮಾಡಿದ್ದ ವೇಳೆ ರಾಜಕೀಯವಾಗಿ ಯಾವುದೆ ಚರ್ಚೆ ಮಾಡಿಲ್ಲ. ಕೆಲವರು ನನಗೆ ಸಚಿವ ಸ್ಥಾನ ನೀಡಬೇಕು ಎಂದು ಹೇಳುತ್ತಿದ್ದರೆ. ಇನ್ನು ಕೆಲವರು ಬೇಡ ಎಂದು ಹೇಳುತ್ತಿದ್ದಾರೆ. ವಿರೋಧ ಮಾಡುವವರ ಬಗ್ಗೆ ಪ್ರಮುಖರಾಗಿರುವ ರೇಣುಕಾಚಾರ್ಯ ಕೂಡ ನನ್ನ ಸ್ನೇಹಿತರು. ನನ್ನ ಮತ್ತು ಅವರ ನಡುವೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಮತ್ತು ನಾನು 20 ವರ್ಷದ ಸ್ನೇಹಿತರು. ಆ ಕಾರಣಕ್ಕಾಗಿ ಅವರು ನನ್ನ ಪರವಾಗಿ ಹೈಕಮಾಂಡ್ ನಾಯಕರ ಬಳಿ ಮಾತನಾಡುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ