Breaking News

ಬಿಎಂಟಿಸಿ ಬಸ್‌ಗೆ ವಿಕಲಚೇತನ ಬಲಿ

Spread the love

ಬೆಂಗಳೂರು, ಸೆಪ್ಟೆಂಬರ್‌, 18: ಬೆಂಗಳೂರಿನ ಜೀವನಾಡಿ ಸಾರೊಗೆಯಲ್ಲೊಂದಾದ ಬಿಎಂಟಿಸಿ ಸುದ್ದಿಯಾಗುತ್ತಲೇ ಇದೆ. ಬಿಎಂಸಿಟಿ ಬಸ್‌ಗಳಿಗೆ ಹಲವರು ಬಲಿಯಾದ ಘಟನೆಗಳು ಈಗಾಗಲೇ ಸುಮಾರು ನಡೆದಿವೆ. ಇದರ ಬೆನ್ನಲ್ಲೇ ಇದೀಗ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ.

 

ಅಪಘಾತಕ್ಕೆ ಕಾರಣ ಏನು.?: ಬಿಎಂಟಿಸಿ ಬಸ್ಸೊಂದು ನಗರದ ಯಶವತಪುರದಿಂದ ಮೆಜೆಸ್ಟಿಕ್‌ಗೆ ಬರುತ್ತಿದ್ದ ವೇಳೆಯೇ ಈ ಅಪಘಾತ ಸಂಭವಿಸಿದೆ. ಇನ್ನು ಘಟನೆಗೆ ಅತಿವೇಗದ ಚಾಲನೆಯೇ ಕಾರಣ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ.

ಉಪ್ಪಾರಪೇಟೆ ಪೊಲೀಸರು ವಶಕ್ಕೆ: ಇನ್ನು ಅಪಘಾತಕ್ಕೆ ಕಾರಣವಾದ ಬಿಎಂಟಿಸಿ ಚಾಲಕ ಗೋಪಾಲಯ್ಯ ಎಂಬುವವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಷ್ಟೇ ಅಲ್ಲದೆ, ಈ ಹಿಂದೆಯೂ ಸಹ ಬಿಎಂಟಿಸಿ ಬಸ್‌ಗಳು ಹಲವರನ್ನು ಬಲಿ ಪಡೆದ ಉದಾಹರಣೆಗಳಿವೆ. ಹಳೆಯ ಬಸ್‌ಗಳನ್ನೇ ಓಡಿಸಲು ಕೊಡುತ್ತಿದ್ದಾರೆ. ಇದರಿಂದ ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಮಾಯಕ ಜನರೇ ಬಲಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಗಳು ಕೇಳಿಬರುತ್ತಿವೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ