Breaking News

ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

Spread the love

ಬೆಂಗಳೂರು, ಸೆಪ್ಟೆಂಬರ್‌ 18: ದೇಶದಲ್ಲಿ‌ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭವಿಷ್ಯ ನುಡಿದಿದ್ದಾರೆ.

 

ಬುಧವಾರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ‌ ಬೆದರಿಕೆ ಹಾಕಿದೆ ಎಂದು ಹೇಳಿದರು.

ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ, ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ‌ ಆಗ್ರಹಿಸಿದರು.


Spread the love

About Laxminews 24x7

Check Also

ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ – ಆಸ್ಪತ್ರೆಗೆ ದಾಖಲು

Spread the loveಶಿವಮೊಗ್ಗ: ಇಂದಿನಿಂದ ಆರಂಭವಾದ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ