Breaking News

ಅನಂತ್ ಕುಮಾರ್ ಹೆಗ್ಡೆಗೆ ಟಿಕೆಟ್ ತಪ್ಪಿಸಿದ್ದು ನಾನೆ : ಛಲವಾದಿ ನಾರಾಯಣಸ್ವಾಮಿ

Spread the love

ರಾಯಚೂರು : ಈ ಬಾರಿ ಲೋಕಸಭಾ ಚುನಾವಣೆಗೆ ಅನಂತ್ ಕುಮಾರ್‌ ಅವರಿಗೆ ಟಿಕೆಟ್ ಕೊಡಬೇಡಿ ಎಂದು ನಾನೇ ಹೇಳಿದ್ದೆ ಎಂದು ವಿಧಾನ ಪರಿಷತ್ ವಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.

ಅಮೇರಿಕಾದಲ್ಲಿ ಮೀಸಲಾತಿ ಕುರಿತು ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ಖಂಡಿಸಿ ರಾಹುಲ್ ಗಾಂಧಿ ರಾಜೀನಾಮೆಗೆ ಆಗ್ರಹಿಸಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಅನಂತ ಕುಮಾರ್ ಹೆಗಡೆಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರವನ್ನು ಪ್ರಸ್ತಾಪಿಸಿದರು.

 

ಹೌದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮಂತ್ರಿ ಇದ್ದಾಗಲೇ ಮೋದಿಜಿಯವರು ಅನಂತ್ ಕುಮಾರ್ ಅವರನ್ನು ಪಾರ್ಲಿಮೆಂಟಿಗೆ ಕರೆಸಿ ದೇಶದ ಜನರ ಕ್ಷಮೆ ಕೇಳಿಸಿದ್ದರು. ಆದ್ರೆ, ಅವರು ಪುನಃ ಸಂವಿಧಾನ ಬದಲಾವಣೆ ಮಾತನಾಡಿದರು. ಹಾಗಾಗಿ ನಾನೇ ನಮ್ಮ ಮುಖಂಡರಿಗೆ ಖಡಕ್ ಆಗಿ ಹೇಳಿದ್ದೆ. ಯಾವುದೇ ಕಾರಣಕ್ಕೂ ಅನಂತ್ ಕುಮಾರ್‌ ಅವರಿಗೆ ಟಿಕೆಟ್ ಕೊಡಬೇಡಿ ಎಂದಿದ್ದೆ ಎಂದರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ