Breaking News

ಸಿದ್ದಾಪುರ ಗೇಟ್‌ನಲ್ಲಿ ಅಹೋರಾತ್ರಿ ಉಪವಾಸ

Spread the love

ಕೊಣನೂರು: ‘ನಮಗೆ ನ್ಯಾಯ ಸಿಗುವವರೆಗೂ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ’ ಎಂದು ಸುವರ್ಣ ಕರ್ನಾಟಕ ರಕ್ಷಣಾ ಸೇನೆಯ ಸಂಸ್ಥಾಪಕ ಅಧ್ಯಕ್ಷ ಎಸ್.ರಾಘವೇಂದ್ರ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಕೊಣನೂರು ಮತ್ತು ರಾಮನಾಥಪುರ ಹೋಬಳಿಗಳ ಮೂಲಕ ಹಾದು ಹೋಗಿರುವ ಮಾಗಡಿ- ಸೋಮವಾರಪೇಟೆ ರಾಜ್ಯ ಹೆದ್ದಾರಿ ನಿರ್ಮಾಣದಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ಸಿದ್ದಾಪುರ ಗೇಟ್ ಸರ್ಕಲ್‌ನಲ್ಲಿ ಸುವರ್ಣ ಕರ್ನಾಟಕ ರಕ್ಷಣಾ ಸೇನೆಯಿಂದ ಮಂಗಳವಾರದಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

 

‘ರಾಮನಾಥಪುರ ಹೋಬಳಿ ಹಾಗೂ ಕೊಣನೂರು ಹೋಬಳಿಗಳ ವ್ಯಾಪ್ತಿಯಲ್ಲಿ ಕೆಶಿಫ್-3 ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯಿಂದ ಮಾಗಡಿಯಿಂದ ಸೋಮವಾರಪೇಟೆ ಮಾಡಲಾಗುತ್ತಿದೆ. ಈ ಕಾಮಗಾರಿಯಲ್ಲಿ ಅನೇಕ ಲೋಪದೋಷಗಳು ಇರುವುದರಿಂದ ಅಪಘಾತಕ್ಕೆ ಕಾರಣವಾಗಿದೆ’ ಎಂದು ದೂರಿದರು.


Spread the love

About Laxminews 24x7

Check Also

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್

Spread the loveಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ