Breaking News

ಕೊಳ್ಳೇಗಾಲ: ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

Spread the love

ಚಾಮರಾಜನಗರ, ಸೆಪ್ಟೆಂಬರ್, 19: ಇತ್ತೀಚೆಗಷ್ಟೇ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳ ಬಂಧಿಸಿತ್ತು. ಇದೀಗ ಮತ್ತೆ ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಜೀವಂತ ನಕ್ಷತ್ರ ಆಮೆಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

 

ಚಾಮರಾಜನಗರ ತಾಲ್ಲೂಕು ಕುಳ್ಳೂರು ಗ್ರಾಮದ ಮಾದೇಶ್, ತಮಿಳುನಾಡಿನ ಸತ್ತಿ ತಾಲ್ಲೂಕಿನ ಕಾನಗೆರೆ ಗ್ರಾಮದ ಶಿವಕುಮಾರ್, ಪಿರಿಯಾಪಟ್ಟಣ ತಾಲ್ಲೂಕಿನ ಆನಂದನಗರ ಗ್ರಾಮದ ಜಾಕೀರ್ ಷರೀಫ್ ಬಂಧಿತ ಆರೋಪಿಗಳು. ಇವರಿಂದ ಮೂರು ಜೀವಂತ ನಕ್ಷತ್ರ ಆಮೆಗಳು, ಒಂದು ಮಾರುತಿ ಸುಜುಕಿ ಕಾರನ್ನು ಜಪ್ತಿ ಮಾಡಲಾಗಿದೆ.

ಆರೋಪಿಗಳು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಆಮೆಗಳನ್ನು ಹಿಡಿದು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಹಿನ್ನೆಲೆ ಕಾರಿನಲ್ಲಿ ಸಾಗಾಣಿಕೆ ಮಾಡುತ್ತಿರುವ ಈ ವೇಳೆ ಅರಣ್ಯ ಸಂಚಾರಿ ದಳ ದಾಳಿ ನಡೆಸಿ ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಅರಣ್ಯ ಸಂಚಾರಿ ದಳದ ಪೊಲೀಸರು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ