Breaking News

ನಿವೇಶನ ವಿವಾದ: ಎರಡು ಗುಂಪುಗಳ ನಡುವೆ ಗಲಾಟೆ; ಕೊಂಡಸಕೊಪ್ಪದಲ್ಲಿ ಪೊಲೀಸ್‌ ಕಾವಲು

Spread the love

ಬೆಳಗಾವಿ: ತಾಲ್ಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಗುರುವಾರ ನಿವೇಶನ ವಿಚಾರಕ್ಕೆ ನಡೆದ ಜಗಳದಲ್ಲಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸೇರಿ ನಾಲ್ವರ ಮೇಲೆ ಹಲ್ಲೆ ಮಾಡಲಾಗಿದೆ.

ಬಸ್ತವಾಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಠ್ಠಲ ಸಾಂಬ್ರೇಕರ್ ಅವರ ತಲೆಗೆ ತೀವ್ರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇವರ ಮೂವರು ಸ್ನೇಹಿತರು ಚಿಕಿತ್ಸೆ ಪಡೆದು ಮರಳಿದ್ದಾರೆ.

ಕೊಂಡಸಕೊಪ್ಪದವರಾದ ಪುಂಡಲೀಕ ಕುಡಚೇಕರ, ಭೀಮಾ ದೇಮನ್ನವರ, ನಾಗಪ್ಪ ವಾಳಕೆ, ಗಜು ಡೋಂಗ್ರೆ, ಮೋನಪ್ಪ ಗುಜರಾನಟ್ಟಿ, ಶಂಕರ ಪಾಟೀಲ ಆರೋಪಿಗಳು. ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ತವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೊಂಡಸಕೊಪ್ಪ ಗ್ರಾಮದಲ್ಲಿ ಮಂದಿರ ನಿರ್ಮಾಣಕ್ಕೆ ವಿಠ್ಠಲ ಅವರು ಜಾಗ ಕೊಟ್ಟಿದ್ದರು. ಅದಕ್ಕೆ ಬದಲಿಯಾಗಿ ಬೇರೆಗೆ ಅವರಿಗೆ ಜಾಗ ಒದಗಿಸಲಾಗಿದೆ. ಆ ಜಾಗದಲ್ಲಿ ಮನೆ ಕಟ್ಟಲು ಶುರು ಮಾಡಿದ್ದರಿಂದ ವಿರೋಧಿ ಗುಂಪಿನವರು ತಕರಾರು ತೆಗೆದರು.

ಗುರುವಾರ ಈ ಜಗಳ ತೀವ್ರವಾಗಿ ಎರಡು ಗುಂಪುಗಳ ಮಧ್ಯೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು. ವಿಠ್ಠಲ ಅವರ ಮನೆಗೆ ನುಗ್ಗಿದ ಆರೋಪಿಗಳು ಕಟ್ಟಿಗೆ, ಇಟ್ಟಿಗೆ, ಕಲ್ಲಿನಿಂದ ದಾಳಿ ಮಾಡಿತು ಎಂದು ತಿಳಿಸಲಾಗಿದೆ.

ವಿಠ್ಠಲ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಹಿರೇಬಾಗೇವಾಡಿ ಪೊಲೀಸರು ಗ್ರಾಮದಲ್ಲಿ ಬಂದೊಬಸ್ತ್‌ ಮಾಡಿದ್ದಾರೆ.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ