Breaking News

ಜಮೀನು ವಿವಾದ: ಗ್ರಾಮದ ಹಿರಿಯನ ಕೊಲೆ

Spread the love

ಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಹೊಸೂರು ಗ್ರಾಮದ ಹದ್ದಿಯಲ್ಲಿ ಶುಕ್ರವಾರ ತಡರಾತ್ರಿ, ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲಾಗಿದೆ. ತಡರಾತ್ರಿಯೇ ಕಾರ್ಯಪ್ರವೃತ್ತರಾದ ಇಲ್ಲಿನ ಪೊಲೀಸರು ನಾಲ್ಕೇ ತಾಸಿನಲ್ಲಿ ಪ್ರಕರಣ ಭೇದಿಸಿ ಮೂವರನ್ನು ಬಂಧಿಸಿದ್ದಾರೆ.

 

ಬೈಕ್ ಮೇಲೆ ತೆರಳುತ್ತಿದ್ದ, ಗ್ರಾಮದ ಹಿರಿಯ ವಿಠ್ಠಲ ಜೋತಪ್ಪ ರಾಮಗೋನಟ್ಟಿ (60) ಕೊಲೆಯಾದವರು. ಬೈಕ್‌ ಓಡಿಸುತ್ತಿದ್ದ ಭೀಮಪ್ಪ ಅವರ ಹಿಂದಿದ್ದ ಬಾಬು ಗಾಯಗೊಂಡಿದ್ದಾರೆ. ಭೀಮಪ್ಪ ಅವರನ್ನು ಕೊಲೆ ಮಾಡುವ ಉದ್ದೇಶದಿಂದ ಬೈಕಿಗೆ ಕಾರು ಡಿಕ್ಕಿ ಹೊಡೆಸಲಾಗಿದೆ. ಆದರೆ, ಭೀಮಪ್ಪ ಬೈಕ್‌ ಓಡಿಸುತ್ತಿದ್ದರು. ಬಾಬು ಮಧ್ಯದಲ್ಲಿ, ವಿಠ್ಠಲ ಕೊನೆಯಲ್ಲಿ ಕುಳಿತಿದ್ದರು. ಕಾರು ನೇರವಾಗಿ ವಿಠ್ಠಲ ಅವರಿಗೆ ಗುದ್ದಿ, 50 ಮೀಟರ್‌ ದೂರ ಎಳೆದುಕೊಂಡು ಹೋಗಿದ್ದರಿಂದ ಅವರು ಸ್ಥಳದಲ್ಲೇ ಸಾನ್ನಪ್ಪಿದ್ದಾರೆ. ಜಮೀನು ವಿವಾದವೇ ಘಟನೆಗೆ ಕಾರಣ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.

ಇಂಗಳಗಿ ಗ್ರಾಮದ ಲಾಜ್ಮಿ, ಯಾಸ್ಮಿನ್, ಮೊಹಮ್ಮದ್‌ ಎಂಬ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ