Breaking News

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

Spread the love

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ, ನಗರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ವಕೀಲರ ಪರಿಷತ್‌ ಯಶಸ್ವಿಯಾಯಿತು. ವಕೀಲರ ಒತ್ತಡಕ್ಕೆ ಮಣಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 15ರಂದು ಚರ್ಚೆಗೆ ಆಹ್ವಾನಿಸಿದರು.

ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ, ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ತು, ನ್ಯಾಯಪೀಠ- ಕೂಡಲಸಂಗಮ, ಜಿಲ್ಲಾ ವಕೀಲರ ಪರಿಷತ್ ಆಶ್ರಯದಲ್ಲಿ ರಾಜ್ಯದ ವಿವಿಧೆಡೆಯಿಂದ ಪಂಚಮಸಾಲಿ ಸಮಾಜದ ವಕೀಲರು ಸಮಾವೇಶಗೊಂಡರು.

ಇಡೀ ದಿನ ಚರ್ಚೆ ನಡೆಸಿದರು.

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ | ವಕೀಲರ ಹೋರಾಟಕ್ಕೆ ಮಣಿದ ಸಿಎಂ: ಚರ್ಚೆಗೆ ಆಹ್ವಾನ

ಒಂದೇ ವಾರದಲ್ಲಿ ಭೇಟಿಯಾಗಲು ಮುಖ್ಯಮಂತ್ರಿ ಸಮಯ ನೀಡಬೇಕು, ಇಲ್ಲದಿದ್ದರೆ ಈ ಸ್ಥಳದಿಂದಲೇ ಉಗ್ರ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ವಕೀಲರು ಪಟ್ಟು ಹಿಡಿದರು. ಈ ಮಧ್ಯೆ ಸಮಾವೇಶದ ವೇದಿಕೆಗೆ ಬಂದ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌, ‘ಮೀಸಲಾತಿ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಅವರು ಅಕ್ಟೋಬರ್‌ 15ರಂದು ಸಮಯ ನೀಡಿದ್ದಾರೆ’ ಎಂದು ತಿಳಿಸಿದರು.

ಇದಕ್ಕೆ ಒಪ್ಪದ ವಕೀಲರು ಗದ್ದಲ ಆರಂಭಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಸ್ವಾಮೀಜಿ ಅವರಿಗೆ ಫೋನ್‌ ಮಾಡಿ ತಿಳಿಸಬೇಕು ಎಂದು ಪಟ್ಟು ಹಿಡಿದರು. ಸ್ಥಳದಲ್ಲಿದ್ದ ಶಾಸಕ ವಿನಯ ಕುಲಕರ್ಣಿ ಅವರು ಸಿದ್ದರಾಮಯ್ಯ ಅವರಿಗೆ ಮೊಬೈಲ್‌ ಕರೆ ಮಾಡಿ ಶ್ರೀಗಳ ಕೈಗೆ ಕೊಟ್ಟರು.

‘ಈಗ ದಸರಾ ಹಬ್ಬವಿದೆ. ಮುಗಿದ ಬಳಿಕ ಎಲ್ಲರೂ ಕುಳಿತು ಮಾತನಾಡೋಣ. ಹೋರಾಟ ಮುಂದುವರಿಸಬೇಡಿ’ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.


Spread the love

About Laxminews 24x7

Check Also

ಯುಟ್ಯೂಬರ್‌ ಸಮೀರ್‌ ವಿರುದ್ಧದ ಎಫ್‌ಐಆರ್; ವಿಚಾರಣಾ ಪೀಠದ ಕುರಿತು ಸ್ಪಷ್ಟನೆ ಕೇಳಿದ ಹೈಕೋರ್ಟ್

Spread the loveಬೆಂಗಳೂರು : ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಶ್ರೀಕ್ಷೇತ್ರ ಧರ್ಮಸ್ಥಳ, ಅದರ ಧರ್ಮಾಧಿಕಾರಿ, ಮತ್ತವರ ಕುಟುಂಬದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ