Breaking News

ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!

Spread the love

ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು.

ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ.

ಹೌದು ಈ ವಿಚಾರವಾಗಿ ಇಂದು ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು,ಬೆಂಬಲಿಗರೊಂದಿಗೆ ಸಭೆ ನಡೆಸಿದರು. ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ