Breaking News

ಸಿಎಂ B.S.Y.ವಿರುದ್ಧM.T.B.ಗರಂ.!

Spread the love

ಬೆಂಗಳೂರು, ನ.27- ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡುವುದಾಗಿ ಹೇಳುತ್ತಾರೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಾಗಲೆಲ್ಲಾ ಮಂತ್ರಿ ಮಾಡ್ತೀನಿ ಅಂತಾರೆ. ಆದರೆ, ಇನ್ನೂ ದೃಢ ನಿರ್ಧಾರ ಪ್ರಕಟಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಯಡಿಯೂರಪ್ಪನವರು ಅವರ ಪಕ್ಷದಲ್ಲಿ ಯಾರನ್ನು ಬೇಕಾದರೂ ಮಂತ್ರಿಯನ್ನಾಗಿ ಮಾಡಿಕೊಳ್ಳಲಿ. ನಾವು ತ್ಯಾಗ ಮಾಡಿ ಬಂದಿದ್ದೇವೆ. ಮೊದಲು ನಮಗೆ ಮಂತ್ರಿಸ್ಥಾನ ಕೊಡಬೇಕು ಎಂದು ನಾಗರಾಜ್ ಹೇಳಿದ್ದಾರೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ