Breaking News

ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ

Spread the love

ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ.

ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ ನಡೆಸಲು ಅನುಮತಿ ದೊರಕಿದೆ. ಇದು ಪಕ್ಷದ ವರ್ಚಸ್ಸಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಅಂಶಗಳನ್ನು ಮುಂದಿಟ್ಟುಕೊಂಡು ಸಿಎಂ ವಿರೋಧಿಗಳು ದಾಳ ಉರುಳಿಸಲು ಆರಂಭಿಸಿದ್ದಾರೆ.

ಈ ಮೊದಲೇ ಪಕ್ಷದಲ್ಲಿ 2 ಬಣಗಳಿದ್ದವು. ಅವರೆಡರ ನಡುವಿನ ಮುಸುಕಿನ ಗುದ್ದಾಟ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಯಿಂದ ಹಿಡಿದು ಹಲವು ಸಂದರ್ಭಗಳಲ್ಲಿ ಬಹಿರಂಗಗೊಂಡಿದ್ದೂ ಇದೆ. ಆದರೆ ಸಿಎಂ ವಿರುದ್ಧ ಕೇಳಿಬಂದ ಮುಡಾ ನಿವೇಶನ ಹಂಚಿಕೆ ಹಗರಣದ ಆರೋಪ ಈ ಬಣಗಳನ್ನು ಒಗ್ಗೂಡಿಸಿತ್ತು. ಇದಕ್ಕೆ ಕಾರಣವೂ ಇತ್ತು. ಒಂದು ವಿಪಕ್ಷಗಳ ತಂತ್ರಗಾರಿಕೆಯನ್ನು ಹಣಿಯುವುದು, ಮತ್ತೂಂದು ಹೈಕಮಾಂಡ್‌ ಸಿಎಂ ಬೆನ್ನಿಗೆ ನಿಂತಿದ್ದಲ್ಲದೆ ಸಚಿವರು ಮತ್ತು ಶಾಸಕರಿಗೂ ಸ್ಪಷ್ಟ ಸೂಚನೆ ನೀಡಿತ್ತು. ಈಗ ಹೈಕೋರ್ಟ್‌ ತೀರ್ಪಿನ ಬೆನ್ನಲ್ಲೇ ಆ ಒಗ್ಗಟ್ಟಿನಲ್ಲಿ ಬಿರುಕು ಕಾಣಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿ ಸೆರೆ

Spread the loveಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬರಗಿ ಸಮೀಪದ ಮುಕ್ತಿ ಕಾಲೊನಿಯ ಬಾಳೆ ತೋಟದಲ್ಲಿ ಕಾಣಿಸಿಕೊಂಡಿದ್ದ ಹುಲಿಯನ್ನು ಬಂಡೀಪುರ ಅರಣ್ಯ ಸಿಬ್ಬಂದಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ