Breaking News

ವಿಪತ್ತು ಬಂದಾಗ ಸೇವೆ ಮಾಡಿ’

Spread the love

ಹುಕ್ಕೇರಿ: ಹುಕ್ಕೇರಿ ಮತ್ತು ಸಂಕೇಶ್ವರ ವಲಯಗಳ ವಿಪತ್ತು ನಿರ್ವಹಣೆ ಘಟಕದ ಸ್ವಯಂ ಸೇವಕರಿಗೆ ತಾಲ್ಲೂಕಿನ ನಿಡಸೋಶಿಯ ದುರದುಂಡೇಶ್ವರ ಮಠದಲ್ಲಿ ಗುರುವಾರ ನಡೆದ ‘ಶೌರ್ಯ ವಿಪತ್ತು ಸ್ವಯಂ ಸೇವಕರ ತರಬೇತಿ’ ಕಾರ್ಯಕ್ರಮವನ್ನು ಸುಬೇದಾರ್ ಎಸ್.ಕೆ.ದೇಸಾಯಿ ಹಾಗೂ ನಿಡಸೋಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮದೀನಾ ಶಾನೂರ್ ಮಕಾಂದಾರ್ ಉದ್ಘಾಟಿಸಿದರು.

 

ನಂತರ ಮಾತನಾಡಿದ ಸುಬೇದಾರ್ ಎಸ್.ಕೆ.ದೇಸಾಯಿ, ‘ಯುವಕರು ಸೈನ್ಯದಲ್ಲಿ ಸೇರಿ ದೇಶ ಮಾಡಬೇಕಂತಿಲ್ಲ. ದೇಶದ ಒಳಗೆ ಜನರಿಗೆ ವಿಪತ್ತು ಬಂದಾಗ ಸೇವೆ ಸಲ್ಲಿಸಿದರೆ, ಅದುವೇ ದೇಶ ಸೇವೆ’ ಎಂದರು.

ಮಂಗಳೂರಿನ ಉಷಾ ಪೈಯರ್ ಸೇಪ್ಟಿ ಕಂಪನಿ ತರಬೇತುದಾರ ಸಂತೋಷ್ ಪೀಟರ್ ಡಿಸೋಜಾ ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು.

ಜನಜಾಗೃತಿ ವೇದಿಕೆ ಚಿಕ್ಕೋಡಿ ಜಿಲ್ಲಾ ಘಟಕದ ಉಪಾಧ್ಯಕ್ಷ ಪಿ.ಜಿ.ಕೊಣ್ಣೂರ್, ಗ್ರಾಮ ಪಂಚಾಯಿತಿ ಸದಸ್ಯ ಉಮೇಶ್ ಪಾಟೀಲ್ ಮುಖ್ಯ ಅತಿಥಿಗಳಾಗಿದ್ದರು.

ಬೆಳ್ತಂಗಡಿಯ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ವಿಭಾಗದ ಜನಜಾಗೃತಿ ಪ್ರಾದೇಶಿಕ ಕಚೇರಿಯ ಜೈವಂತ್ ಪಟಗಾರ ಪ್ರಾಸ್ತಾವಿಕ ಮಾತನಾಡಿದರು.


Spread the love

About Laxminews 24x7

Check Also

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

Spread the love ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ