Breaking News

ಪರಿಶಿಷ್ಟರ ಮೇಲೆ ದೌರ್ಜನ್ಯ: ತ್ವರಿತ ಕ್ರಮವಾಗಲಿ

Spread the love

ಬೆಳಗಾವಿ: ‘ಪರಿಶಿಷ್ಟರ ಮೇಲೆ ದೌರ್ಜನ್ಯ ನಡೆದ ಕುರಿತು ದೂರು ದಾಖಲಾದರೆ, ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಬಂಧಿತ ಅಧಿಕಾರಿಗಳ ವಿರುದ್ದ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಎಚ್ಚರಿಕೆ ಕೊಟ್ಟರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಎಸ್‌ಸಿ, ಎಸ್‌ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 

‘ಈ ಸಭೆಗೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಹಾಜರಾದವರು ಅನುಪಾಲನಾ ವರದಿ ಸಲ್ಲಿಸಬೇಕು. ನಿಯಮ ಪಾಲಿಸದವರ ವಿರುದ್ಧ ಕ್ರಮ ಅನಿವಾರ್ಯ’ ಎಂದರು.

‘ನ್ಯಾಯ ಕೋರಿ ತಮ್ಮ ಕಚೇರಿಗೆ ಆಗಮಿಸುವ ಜನರೊಂದಿಗೆ ಅಧಿಕಾರಿಗಳು, ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕೋರಿ ಪರಿಶಿಷ್ಟರು ಸಲ್ಲಿಸುವ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ತುರ್ತು ಸಂದರ್ಭ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತ್ವರಿತವಾಗಿ ವೈದ್ಯಕೀಯ ಚಿಕಿತ್ಸೆ ನೀಡಬೇಕು’ ಎಂದು ನಿರ್ದೇಶನ ಕೊಟ್ಟರು.

ನಗರ ಪೊಲೀಸ್ ಕಮಿಷನರ್‌ ಯಡಾ ಮಾರ್ಟಿನ್ ಮಾರ್ನಬ್ಯಾಂಗ್, ‘ನಗರವೂ ಸೇರಿದಂತೆ
ಜಿಲ್ಲೆಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

‘ಜಿಲ್ಲೆಯಲ್ಲಿ ವಿವಿಧೆಡೆ ಪರಿಶಿಷ್ಟರಿಂದ ಸ್ಮಶಾನಭೂಮಿಗೆ ಬೇಡಿಕೆ ಇದೆ. ಅಗತ್ಯವಿರುವ ಕಡೆ ಸ್ಮಶಾನಭೂಮಿ ಮಂಜೂರುಗೊಳಿಸಿ ಅಭಿವೃದ್ಧಿಪಡಿಸಬೇಕು. ‍‍‍ಪರಿಶಿಷ್ಟರ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು’ ಎಂದು ಮುಖಂಡ ಮಲ್ಲೇಶ ಚೌಗಲಾ ಮನವಿ ಮಾಡಿದರು.

ಸಮಿತಿ ನಾಮನಿರ್ದೇಶಿತ ಸದಸ್ಯರಾದ ಕರೆಪ್ಪ ಗುಡೆನ್ನವರ, ವಿಜಯ ತಳವಾರ, ಬಸಪ್ಪ ತಳವಾರ, ಬಸವರಾಜ ಪಾಯಟ್ಟಿ, ನಾಗಪ್ಪ ನರಗಟ್ಟಿ ಮಾತನಾಡಿದರು.


Spread the love

About Laxminews 24x7

Check Also

ಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ

Spread the loveಕೆ.ಎಸ್.ಆರ್.ಟಿ.ಸಿ ವಿಭಾಗಮಟ್ಟದ ಕುಂದು ಕೊರತೆ ಸಭೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ನಗರದಲ್ಲಿ ಮಾನ್ಯ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ