Breaking News

ಖರ್ಗೆ ಕುಟುಂಬಕ್ಕೂ ಲೋಕಾಯುಕ್ತ ಕಂಟಕ

Spread the love

ಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ 394 ಪುಟಗಳ ದಾಖಲೆ ಸಮೇತ ಖರ್ಗೆ ಹಾಗೂ ಅವರ ಕುಟುಂಬದ ಮೇಲೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್​ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​ 27: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮೇಲೆ ಸಂಕಷ್ಟ ಎದುರಾಗುತ್ತಿವೆ. ಸದ್ಯ ಸಿದ್ದರಾಮಯ್ಯ ಕಾನೂನು ಹೋರಾಟ ನಡೆಸಿದ್ದಾರೆ. ಇದೆಲ್ಲಾ ಒಂದು ಕಡೆಯಾದರೆ ಇದೀಗ ಮುಡಾ ರೀತಿಯಲ್ಲೇ ಕಾಂಗ್ರೆಸ್ ನಾಯಕರ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge)ಹಾಗೂ ಅವರ ಕುಟುಂಬದ ಮೇಲೆ ಲೋಕಾಯುಕ್ತಕ್ಕೆ ಬಿಜೆಪಿ ಮುಖಂಡ ಎನ್​.ಆರ್​.ರಮೇಶ್ ದೂರು ನೀಡಿದ್ದಾರೆ.​

7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ದೂರು

ಒಟ್ಟು 7 ಜನರ ವಿರುದ್ಧ 394 ಪುಟಗಳ ದಾಖಲೆ ಸಮೇತ ಎನ್.ಆರ್.ರಮೇಶ್ ದೂರು ನೀಡಿದ್ದಾರೆ. ಇದರಲ್ಲಿ ಎಂ.ಬಿ.ಪಾಟೀಲ್ ಮತ್ತು ಐಎಎಸ್​ ಅಧಿಕಾರಿಗಳು ಭಾಗಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ ಐದು ಎಕರೆ ಸಿಎ ಸೈಟ್​ ರೂಪದಲ್ಲಿ ನೀಡಿರುವುದಾಗಿ ವಿಪಕ್ಷ ಬಿಜೆಪಿ ಆರೋಪಿಸಿದ್ದು, ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಸೇರಿದ ಟ್ರಸ್ಟ್​ಗೆ 5 ಎಕರೆ ಜಾಗ ಮಂಜೂರು ಮಾಡಲಾಗಿದೆ.

ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿಯಲ್ಲಿರುವ ಏರೋಸ್ಪೇಸ್ ಪಾರ್ಕ್ ಸಮೀಪದಲ್ಲಿ ಐದು ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಸಿಎ ಸೈಟ್ ಹೆಸರಿನಲ್ಲಿ ಮಂಜೂರು ಮಾಡಿರುವ ಆರೋಪ ಕೇಳಿ ಬಂದಿದೆ. ಇದು ರಾಜಕೀಯ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.

ಸದ್ಯ ಮಲ್ಲಿಕಾರ್ಜುನ ಖರ್ಗೆ, ಪುತ್ರರಾದ ಪ್ರಿಯಾಂಕ್​ ಖರ್ಗೆ, ರಾಹುಲ್ ಖರ್ಗೆ, ಅಳಿಯ ರಾಧಾಕೃಷ್ಣ ಮತ್ತು ಕುಟುಂಬದ ಹೆಸರಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್​​ಗೆ ಶೈಕ್ಷಣಿಕ ಉದ್ದೇಶಕ್ಕೆಂದು ಅಕ್ರಮವಾಗಿ ಎರಡೆರಡು ಬಾರಿ ಸರ್ಕಾರಿ ಭೂಮಿ ಪರಭಾರೆ ಮಾಡಿಸಿಕೊಂಡ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ