Breaking News

ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಮೇಲೆ ವಂಚನೆ ಪ್ರಕರಣ

Spread the love

ಚಾಮರಾಜನಗರ : ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧದ 3 ವರ್ಷಗಳ ಹಿಂದಿನ ವಂಚನೆ ಆರೋಪ ಪ್ರಕರಣ ಸಂಬಂಧ ಇಂದು ಕೋರ್ಟ್​​ಗೆ ಕೃಷ್ಣ ಅವರು ವಿಚಾರಣೆಗೆ ಹಾಜರಾದರು.

 

 

ಕರುಣಾಕರ ಎಂಬುವವರಿಂದ ಕೃಷ್ಣ 2018, 2019 ಹಾಗೂ 2020ರಲ್ಲಿ ತಲಾ ಒಂದು ಲಕ್ಷ ರೂಪಾಯಿಯನ್ನು ಸಾಲ ಪಡೆದು ಸಾಲ ಹಿಂದುರುಗಿಸದೇ ವಂಚನೆ ಮಾಡಿರುವ ಆರೋಪದ ಪ್ರಕರಣ ಇದಾಗಿದೆ. ಈ ಬಗ್ಗೆ ಚಾಮರಾಜನಗರದ JMFC ಕೋರ್ಟ್​ಗೆ ಅವರು ವಿಚಾರಣೆ ಎದುರಿಸಿದರು.

ವಿಚಾರಣೆ ಬಳಿಕ ಪ್ರತಿಕ್ರಿಯೆ ನೀಡಿರುವ ಕೃಷ್ಣ, ನಾನು ಕೇವಲ 50 ಸಾವಿರ ರೂಪಾಯಿ ಸಾಲ ಪಡೆದಿದ್ದೆ. ಆದರೆ 3 ಲಕ್ಷ ರೂಪಾ ಸಾಲ ಪಡೆದುಕೊಂಡಿದ್ದಾಗಿ ಪ್ರಾಮಿಸರಿ ನೋಟ್ ಬರೆಸಿಕೊಂಡು, ನನ್ನ ವಿರುದ್ಧ ಸುಳ್ಳು ಕೇಸ್​ ದಾಖಲಿಸಿದ್ದರು. ಈ ಸಾಲಕ್ಕೆ ನಾನು ಬಡ್ಡಿಯೂ ಕಟ್ಟಿದ್ದೇನೆ ಎಂದಿರುವ ಅವರು, ಶೀಘ್ರವೇ ಈ ಬಗ್ಗೆ ನಿಜ ಏನು ಎಂಬುವುದು ಹೊರ ಬೀಳಲಿದೆ ಎಂದಿದ್ದಾರೆ.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ