Breaking News

ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್

Spread the love

ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.

ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ..

 

ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು ಎಂದಾದರೆ ನೀವು ರಾಜೀನಾಮೆ ಕೊಡಿ ಎಂದು ಯತ್ನಾಳ್​ ಪುನರುಚ್ಛರಿಸಿದರು.

ಕಾಂಗ್ರೆಸ್​​​ನಲ್ಲಿರುವವರೇ ಸಿದ್ದರಾಮಯ್ಯರನ್ನು ಬಲಿಪಶು ಮಾಡಿದ್ದಾರೆಂದು ಆರೋಪಿಸಿರುವ ಯತ್ನಾಳ್, ನ್ಯಾಯಾಂಗ ವ್ಯವಸ್ಥೆ ಏನು ನಿರ್ದೇಶನ ಕೊಡಬೇಕು ಅದು ಕೊಟ್ಟಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ A1 ಆರೋಪಿ ಎಂದು ಎಫ್​​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಆಗಬೇಕು. ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮತ್ತೆ ಕೋರ್ಟ್​ ತೀರ್ಪು ಬಂದ ಬಳಿಕ ನೀವೇ ಮತ್ತೊಮ್ಮೆ ಸಿಎಂ ಆಗಬಹುದು. ನಿಮಗೆ ಒಳ್ಳೆಯ ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ