Breaking News

ದ್ರಾಮಯ್ಯ ಚಿಲ್ಲರೆ ರಾಜಕಾರಣಿಯಲ್ಲ, ಗೌರವದಿಂದ ರಾಜೀನಾಮೆ ಕೊಡಲಿ-ಯತ್ನಾಳ್

Spread the love

ಬೆಳಗಾವಿ : ಚಿಲ್ಲರೆ ರಾಜಕಾರಣಿಗಳ ರೀತಿ ನೀವು ಮಾಡದೇ ಗೌರವಯುತವಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.

ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಇಂದು ಸಿಎಂ ವಿರುದ್ಧ FIR ದಾಖಲಾಗಿದ್ದು, ಈ ಬಗ್ಗೆ ಬೈಲಹೊಂಗಲದಲ್ಲಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ಸಿದ್ದರಾಮಯ್ಯ ಅವರೇ..

 

ನಿಮ್ಮ ಸುತ್ತಮುತ್ತಲಿನ ಪಟಾಲಂನಿಂದ ನಿಮಗೆ ತಪ್ಪು ಸಲಹೆ ನೀಡಲಾಗಿದೆ. ನಿಮ್ಮ ಹೆಸರು ಉಳಿಯಬೇಕು ಎಂದಾದರೆ ನೀವು ರಾಜೀನಾಮೆ ಕೊಡಿ ಎಂದು ಯತ್ನಾಳ್​ ಪುನರುಚ್ಛರಿಸಿದರು.

ಕಾಂಗ್ರೆಸ್​​​ನಲ್ಲಿರುವವರೇ ಸಿದ್ದರಾಮಯ್ಯರನ್ನು ಬಲಿಪಶು ಮಾಡಿದ್ದಾರೆಂದು ಆರೋಪಿಸಿರುವ ಯತ್ನಾಳ್, ನ್ಯಾಯಾಂಗ ವ್ಯವಸ್ಥೆ ಏನು ನಿರ್ದೇಶನ ಕೊಡಬೇಕು ಅದು ಕೊಟ್ಟಿದೆ. ಪ್ರಕರಣದಲ್ಲಿ ಸಿದ್ದರಾಮಯ್ಯ A1 ಆರೋಪಿ ಎಂದು ಎಫ್​​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ತನಿಖೆ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಆಗಬೇಕು. ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ಕೊಡಬೇಕು. ಮತ್ತೆ ಕೋರ್ಟ್​ ತೀರ್ಪು ಬಂದ ಬಳಿಕ ನೀವೇ ಮತ್ತೊಮ್ಮೆ ಸಿಎಂ ಆಗಬಹುದು. ನಿಮಗೆ ಒಳ್ಳೆಯ ಅವಕಾಶವಿದೆ ಎಂದು ಅಭಿಪ್ರಾಯಪಟ್ಟರು.


Spread the love

About Laxminews 24x7

Check Also

ರಸ್ತೆಗುಂಡಿ ಮುಚ್ಚಲು ನೀಡಿದ್ದ ಗಡುವು ಅಂತ್ಯ: ‘Please ask D.K.Shivakumar’ ಎಂದ ಸಿದ್ದರಾಮಯ್ಯ

Spread the loveಬೆಂಗಳೂರು: ರಾಜಧಾನಿಯಲ್ಲಿ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಗೆ ನೀಡಿದ್ದ ಗಡುವು ಇಂದಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ