Breaking News

ಪೊಲೀಸರ ಹೆಸರಿನಲ್ಲಿ ಸ್ವಾಮೀಜಿಗೆ ₹1 ಕೋಟಿ ವಂಚನೆ

Spread the love

ಬಾಗಲಕೋಟೆ: ತಾಲ್ಲೂಕಿನ ಗದ್ದನಕೇರಿ ಬಳಿ ಇರುವ ರಾಮಾರೂಢ ಮಠದ ಸ್ವಾಮೀಜಿಗೆ ಉನ್ನತ ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ₹1 ಕೋಟಿ ವಂಚನೆ ಮಾಡಲಾಗಿದೆ.

ಜೆಡಿಎಸ್‌ ಮುಖಂಡ ಪ್ರಕಾಶ ಮುಧೋಳ ಎನ್ನುವವರು ಡಿವೈಎಸ್‌ಪಿ ಹೆಸರಿನಲ್ಲಿ, ಇಬ್ಬೊಬ್ಬರು ಎಡಿಜಿಪಿ ಹೆಸರಿನಲ್ಲಿ ರಾಮಾರೂಢ ಮಠದ ಪರಮಹಂಸ ಪರಮರಾಮರೂಢ ಸ್ವಾಮೀಜಿಗೆ ಕರೆ ಮಾಡಿ, ಗೃಹ ಸಚಿವರ ಕಚೇರಿಯಿಂದ ನಮ್ಮ ಕಚೇರಿಗೆ ಸಾಕಷ್ಟು ದೂರುಗಳು ಬಂದಿವೆ.

ಅವುಗಳನ್ನು ವಿಚಾರಣೆ ಮಾಡಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ. ಜೈಲಿಗೆ ಕಳುಹಿಸುತ್ತೇವೆ ಎಂದು ಹೆದರಿಸಿದ್ದಾರೆ.

ಎಲ್ಲ ಪ್ರಕರಣಗಳನ್ನು ಮುಚ್ಚಿ ಹಾಕಲು ಸಾಹೇಬರಿಗೆ ಹಣ ಕೊಡದಿದ್ದರೆ, ಕೊಲೆ ಮಾಡುವುದಾಗಿ ಬೆದರಿಸಿ ₹1 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ.

ಇದರಿಂದ ಬೆದರಿದ ಸ್ವಾಮೀಜಿ ಬೆಂಗಳೂರಿನ ವಿಧಾನಸೌಧದ ಬಳಿ ₹61 ಲಕ್ಷ ಹಾಗೂ ಎರಡು ಖಾಲಿ ಚೆಕ್‌, ಹುಬ್ಬಳ್ಳಿಯ ಈದ್ಗಾ ಮೈದಾನದ ಹತ್ತಿರ ₹31 ಲಕ್ಷ ಹಣವನ್ನು ಶಿವಕುಮಾರ ಮಡ್ಡಿ ಮೂಲಕ ಕೊಡಲಾಗಿದೆ.

₹1 ಕೋಟಿ ಪಡೆದ ನಂತರ ಆರೋಪಿಗಳು ಸ್ವಾಮೀಜಿ ಬಳಿ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಅನುಮಾನಗೊಂಡ ಸ್ವಾಮೀಜಿಗೆ ಮೋಸ ಹೋಗಿದ್ದೇನೆ ಎಂದು ಗೊತ್ತಾಗಿ ಬಾಗಲಕೋಟೆಯ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Spread the love

About Laxminews 24x7

Check Also

ಧರ್ಮವೆಂದರೆ ಮೀಸಲಾತಿ ಹೋರಾಟವಲ್ಲ : ಬಸವಲಿಂಗಮಹಾಸ್ವಾಮಿಗಳು

Spread the loveಬಾಗಲಕೋಟೆ: ಧರ್ಮ ಎಂದರೆ ಮೀಸಲಾತಿ ಹೋರಾಟಗಳಲ್ಲ ಅದೊಂದು ಸಾಮಾಜಮುಖಿ ಚಿಂತನೆಯ ನಡೆಯಾಗಿದ್ದು ಇತ್ತೀಚೆಗೆ ಧರ್ಮದ ಮೂಲ ಪರಿಕಲ್ಪನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ