Breaking News

ಲಿಂಬು, ಅಂಟವಾಳದಿಂದ ಪರಿಸರಸ್ನೇಹಿ ಮಾರ್ಜಕ

Spread the love

ಹುಬ್ಬಳ್ಳಿ: ಧಾರವಾಡದ ಕೃಷಿ ವಿಶ್ವವಿದ್ಯಾಲಯ ಕಳೆದ ವಾರ ಆಯೋಜಿಸಿದ್ದ ಕೃಷಿ ಮೇಳದಲ್ಲಿ ನವೋದ್ಯಮಿಗಳ ಉತ್ಸಾಹವೂ ಜನರನ್ನು ಸೆಳೆದವು. ಮೇಳದ ಫಲಪುಷ್ಪ ಪ್ರದರ್ಶನ ವಿಭಾಗದಲ್ಲಿ ಹತ್ತಾರು ನವೋದ್ಯಮಿಗಳು ತಮ್ಮ ಉದ್ಯಮವನ್ನು ಪರಿಚಯಿಸಿದರು.

ಅವುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪೂಜಾ ದೇಶಪಾಂಡೆ ಪರಿಸರಸ್ನೇಹಿ ಮಾರ್ಜಕಗಳನ್ನು (ಡಿಟೆರ್ಜೆಂಟ್‌), ಖಾನಾಪುರದ ಆರ್‌.ಐ.ಪಾಟೀಲರು ಕಬ್ಬಿನ ಹಾಲನ್ನು ವರ್ಷವಿಡೀ ಬಾಳುವಂತೆ ಮಾಡಿರುವುದರ ಜತೆಗೆ ಟೀ, ಕಾಫಿಗೆ ಸಕ್ಕರೆ ಬದಲು ಸಾವಯವ ಬೆಲ್ಲದ ಪುಡಿ ಬಳಸುವಂಥ ಕಬ್ಬಿನ ಉತ್ಪನ್ನ ಪರಿಚಯಿಸಿದ್ದಾರೆ.

 

ಎಂಜಿನಿಯರಿಂಗ್‌ ಪದವಿ ಓದಿರುವ ಪೂಜಾ ಅವರು ರಾಸಾಯನಿಕಯುಕ್ತ ಡಿಟೆರ್ಜೆಂಟ್‌ ಬಳಕೆಯಿಂದ ತಮ್ಮ ಮಗುವಿಗೆ ಎದುರಾದ ಚರ್ಮದ ಸಮಸ್ಯೆಗಳಿಗೆ ಮುಕ್ತಿ ಕಂಡುಕೊಂಡಿದ್ದು, ತಮ್ಮ ತೋಟದಲ್ಲಿ ಬೆಳೆದ ಲಿಂಬು, ಅಂಟವಾಳದಿಂದ ತಯಾರಿಸಿದ ಪರಿಸರಸ್ನೇಹಿ ಡಿಟೆರ್ಜೆಂಟ್‌ನಿಂದ. ಆರಂಭದಲ್ಲಿ ಮನೆಬಳಕೆಗಷ್ಟೇ ಪರಿಸರಸ್ನೇಹಿ ಡಿಟೆರ್ಜೆಂಟ್‌ ತಯಾರಿಸಿಕೊಂಡ ಪೂಜಾ, ನಂತರ ಬಂಧುಗಳು, ಸ್ನೇಹಿತರಿಂದ ಉತ್ತಮ ಸ್ಪಂದನೆ, ಬೇಡಿಕೆ ಬಂದಾಗ ಉತ್ಪನ್ನದ ಪ್ರಮಾಣ ಹೆಚ್ಚಿಸಿದರು. ಧರಣಿ (ನ್ಯಾಚುರಲ್‌ ಬೇಸಡ್‌ ಹೋಮ್‌ಕೇರ್‌ ಪ್ರೊಡಕ್ಟ್‌) ಎಂಬ ಲೇಬಲ್‌ ಅಡಿಯಲ್ಲಿ ಡಿಟೆರ್ಜೆಂಟ್‌ ಸಿದ್ಧಪಡಿಸಿ ಉದ್ಯಮವಾಗಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ