Breaking News

ಯುವ ದಸರಾ” ಕಾರ್ಯಕ್ರಮದ ಸ್ಥಳ ಪರಿಶೀಲಿಸಿದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

Spread the love

ಮೈಸೂರು : ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಇಂದು ಪರಿಶೀಲಿಸಿದರು.

ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ “ಯುವ ದಸರಾ” ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು.

ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.

ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ