Breaking News

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

Spread the love

ಬೆಳಗಾವಿ: ಕರ್ನಾಟಕದ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಮಿರಜ್ ತಾಲೂಕಿನ ಮೈಶಾಳ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಮೈಶಾಳ ಗ್ರಾಮದ ಪಾರೀಶನಾಥ ಹೊನಮೋರೆ(40), ಸಾಯಿರಾಜ ಪಾರೀಶನಾಥ ಹೊನಮೋರೆ(13), ಪ್ರದೀಪ ಶ್ರೀಕೃಷ್ಣ ಮೋಠೆ (35) ಮೃತಪಟ್ಟಿದ್ದು, ಹೇಮಂತ ಹೊನಮೋರೆ(14) ಗಂಭೀರ ಗಾಯಗೊಂಡು ಮಿರಜ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ರವಿವಾರ ಬೆಳಗ್ಗೆ ಹೊಲದಲ್ಲಿ ಮೇವು ಸಂಗ್ರಹಿಸಿ ಇಡುವಾಗ ವಿದ್ಯುತ್ ತಂತಿ ಮುರಿದು ಬಿದ್ದಿತ್ತು.

ಮೇವು ಇಡುವಾಗ ಪಾರೀಶನಾಥ ತಂತಿ ತುಳಿದು ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದಿದ್ದಾರೆ. ಆಗ ಇದನ್ನು ನೋಡಿದ ಮಗ ಸಾಯಿರಾಜ ತಂದೆಯ ಎಬ್ಬಿಸಲು ಹೋದಾಗ ಈತನಿಗೂ ವಿದ್ಯುತ್ ತಗುಲಿದೆ. ಜತೆಗೆ ಪ್ರದೀಪ ಎಂಬ ವ್ಯಕ್ತಿಗೂ ವಿದ್ಯುತ್ ತಗುಲಿ ಸ್ಥಳದಲ್ಲಿಯೇ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಮತ್ತೊಬ್ಬ ಮಗ ಹೇಮಂತ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರ ವಿದ್ಯುತ್ ಸರಬರಾಜು ಮಂಡಳಿ ವಿರುದ್ಧ ಕುಟುಂಬಸ್ಥರು ಹಾಗೂ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಮಿರಜ್ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ ಆರೋಪಿಗೆ 30 ವರ್ಷ ಜೈಲುಶಿಕ್ಷೆ

Spread the love ಬೆಳಗಾವಿ: ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಗೆ ಕೊನೆಗೂ ಶಿಕ್ಷೆಯಾಗಿದೆ. ಆಕೆ ಗರ್ಭಿಣಿಯಾಗಿ ಮಗುವಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ