Breaking News

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

Spread the love

ಸಿರವಾರ: ಪಟ್ಟಣದ ಲಿಂಗಸೂರು ಮುಖ್ಯರಸ್ತೆಯ ಬಂಗ್ಲೆ ಹಳ್ಳದ ಸಮೀಪ ರವಿವಾರ (ಸೆ.29) ಅನ್ನಭಾಗ್ಯದ ಅಕ್ಕಿಯ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.

ರಾಯಚೂರಿನಿಂದ ಲಿಂಗಸೂರು ಕಡೆಗೆ ಹೊರಟಿದ್ದ ಅನ್ನಭಾಗ್ಯದ ಲಾರಿಯು ಬೈಕ್ ನಲ್ಲಿ ತೆರಳುತ್ತಿದ್ದವರಿಗೆ ಡಿಕ್ಕಿ ಹೊಡೆದ ಪರಿಣಾಮ ಕೆ.ಗುಡದಿನ್ನಿ ಗ್ರಾಮದ ಚನ್ನಪ್ಪ (27) ಸ್ಥಳದಲ್ಲಿ ಮೃತಪಟ್ಟಿದ್ದಾನೆ.

ಗಂಭೀರ ಗಾಯಗೊಂಡಿರುವ ಚನ್ನಬಸವ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಸ್ಥಳಕ್ಕೆ ಸಿಪಿಐ ಶಶಿಕಾಂತ.ಎಂ, ಪಿಎಸ್‌ಐ ಅಮರೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ