Breaking News

ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Spread the love

ಕ್ನೋ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಪ್ರತಿನಿಧಿಸುತ್ತಿರುವ ವಾರಾಣಸಿಯ ರಸ್ತೆಯೊಂದರ ಚಿತ್ರವನ್ನು ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್(Akhilesh Yadav) ಅವರು ನಗರದಲ್ಲಿ ಸ್ವಚ್ಛತೆಯ ಕೊರತೆಯ ಬಗ್ಗೆ ಬಿಜೆಪಿ(BJP) ಸರಕಾರದ ವಿರುದ್ಧ ಸೋಮವಾರ(ಸೆ30) ಟೀಕಾ ಪ್ರಹಾರ ನಡೆಸಿದ್ದಾರೆ.

 

ಎಕ್ಸ್ ನಲ್ಲಿ ಕಸದ ರಾಶಿಯ ಫೋಟೋವೊಂದನ್ನು ಪೋಸ್ಟ್ ಮಾಡಿರುವ ಅಖಿಲೇಶ್ ”ಇದು ದೇಶದ ಪ್ರಮುಖ ಸಂಸದೀಯ ಕ್ಷೇತ್ರದ ಸ್ಥಿತಿ, ಕಸದ ರಾಶಿಯೇ ರಸ್ತೆ ಎಂದರೆ ತಪ್ಪಾಗದು. ಇದೇನಾ ‘ಸ್ವಚ್ಛ ಭಾರತ’? ಬನಾರಸ್ ಜಪಾನ್ ನ ಕ್ಯೋಟೋ (ಸ್ವಚ್ಛ ನಗರ) ಆಗಲಿಲ್ಲ. ಆಶಾದಾಯಕವಾಗಿ, ಈ ಪೋಸ್ಟ್ ಪ್ರಕಟವಾದ ನಂತರ, ಈ ಸ್ಥಳವನ್ನು ನಾಳೆಯಿಂದ ಸ್ವಚ್ಛಗೊಳಿಸಲಾಗುತ್ತದೆ. ಬಿಜೆಪಿ ಸರಕಾರ ಕೆಲಸ ಮಾಡುವುದಿಲ್ಲ, ಪ್ರತಿಪಕ್ಷಗಳೇ ಕೆಲಸ ಮಾಡುತ್ತವೆ. ಜನರು ತಮ್ಮ ಕೆಲಸ ಮಾಡಿಸಿಕೊಳ್ಳಲು ವಿಪಕ್ಷಗಳ ಬಳಿಗೆ ಬರುತ್ತಿರುವುದು ಇದೇ ಮೊದಲು” ಎಂದು ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದಿನ ಭೇಟಿಯ ವೇಳೆ ವಾರಾಣಸಿ ನಗರವನ್ನು ಕ್ಯೋಟೋ ನಂತೆ ಸ್ಮಾರ್ಟ್ ಸಿಟಿ ಮಾಡುತ್ತೇವೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ