Breaking News

ಕಬ್ಬಿನ ಗದ್ದೆಯಲ್ಲಿ ಪತ್ತೆಯಾಯ್ತು ಆರು ಅಡಿ ಉದ್ದದ ಹೆಬ್ಬಾವು

Spread the love

ಧಾರವಾಡ: ಧಾರವಾಡ ತಾಲೂಕಿನ ನಿಗದಿ ಗ್ರಾಮದ ರೈತರ ಕಬ್ಬಿನ ಗದ್ದೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಮರಳಿ ಅರಣ್ಯಕ್ಕೆ ಬಿಡಲಾಗಿದೆ.

ನಿಗದಿ ಗ್ರಾಮದ ರೈತ ಸಿದ್ಧಬಸಪ್ಪ ಹಳಿಯಾಳ ಎಂಬ ರೈತ ಅಂಬ್ಲಿಕೊಪ್ಪ ಗ್ರಾಮದ ಹದ್ದಿನಲ್ಲಿ ಕಬ್ಬಿನ ಜಮೀನು ಹೊಂದಿದ್ದು, ಕಬ್ಬಿನ ಸೋಗೆ ಸುಲಿಯುವ ಸಂದರ್ಭದಲ್ಲಿ ಈ ಹೆಬ್ಬಾವು ರೈತನ ಕಣ್ಣಿಗೆ ಬಿದ್ದಿದೆ.

ಕೂಡಲೇ ಈ ಮಾಹಿತಿಯನ್ನು ಉರಗ ರಕ್ಷಕ ಯಲ್ಲಪ್ಪ ಜೋಡಳ್ಳಿ ಅವರ ಗಮನಕ್ಕೆ ತಂದಾಗ ಯಲ್ಲಪ್ಪ ಮತ್ತು ಆತನ ಸಂಗಡಿಗರು ಸ್ಥಳಕ್ಕೆ ಹೋಗಿ ಆ ಹೆಬ್ಬಾವನ್ನು ರಕ್ಷಣೆ ಮಾಡಿದ್ದಾರೆ.

ಅಂದಾಜು 4 ವರ್ಷದ ಹೆಣ್ಣು ಹೆಬ್ಬಾವು ಇದಾಗಿದ್ದು, ಸುಮಾರು 20-25 ಕೆಜಿ ತೂಕದ ಜತೆಗೆ ಆರು ಅಡಿ ಉದ್ದವಿದೆ. ಕಬ್ಬಿನ ಗದ್ದೆಯಲ್ಲಿ ಕಾರ್ಯಾಚರಣೆ ನಡೆಸಿ ಯಲ್ಲಪ್ಪ ಅವರು ಆ ಹೆಬ್ಬಾವನ್ನು ರಕ್ಷಣೆ ಮಾಡಿ ಧಾರವಾಡದ ಅರಣ್ಯ ಇಲಾಖೆಗೆ ತಂದಿದ್ದರು. ಅಲ್ಲಿ ಅರಣ್ಯ ಇಲಾಖೆಯವರ ಆದೇಶದಂತೆ ಆ ಹಾವನ್ನು ಮರಳಿ ಅರಣ್ಯಕ್ಕೆ ಬಿಟ್ಟಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ