ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ.
ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.