Breaking News

ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದಾಖಲಾಗಿತ್ತು ದೂರು: ಕೇಸ್ ಕೊಟ್ಟು ಹಿಂದೆ ಸರಿದಿದ್ದ ದೂರುದಾರೆ!

Spread the love

ತ್ಯಾಚಾರ ಪ್ರಕರಣದಲ್ಲಿ ಎಸ್​ಐಟಿ ಕಸ್ಟಡಿಯಲ್ಲಿರುವ ಶಾಸಕ ಮುನಿರತ್ನರನ್ನು ನಿರಂತರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ದೂರು ದಾಖಲಾಗಿದ್ದರೂ ಎಫ್​ಐಆರ್ ದಾಖಲಾಗಿರಲಿಲ್ಲ ಎನ್ನಲಾಗಿದೆ. ಅಷ್ಟಲ್ಲದೇ, ದಾರುದಾರೆ ಕೂಡ ವಿಚಾರಣೆಗೆ ಹಾಜರಾಗಿರಲಿಲ್ಲ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಸಾಕಷ್ಟು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ

 

ಬೆಂಗಳೂರು, ಅಕ್ಟೋಬರ್ 2: ಒಂದಲ್ಲ ಎರಡಲ್ಲ, ಮೂರು ಪ್ರಕರಣಗಳಲ್ಲಿ ಆರೋಪಿಯಾಗಿರುವ ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ಈಗ ಎಸ್​ಐಟಿ ಕಸ್ಟಡಿಯಲ್ಲಿದ್ದಾರೆ.

ಅತ್ಯಾಚಾರ ಪ್ರಕರಣ ಸಂಬಂಧ ಎಸ್​ಐಟಿ ಅಧಿಕಾರಿಗಳ ವಿಚಾರಣೆ ಎದುರಿಸುತ್ತಿದ್ದಾರೆ. ಸಂತ್ರಸ್ತೆಯ ಆರೋಪಗಳೆಲ್ಲ ಸುಳ್ಳು ಅಂತ ತಮ್ಮನ್ನು ತಾವು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಮುನಿರತ್ನ ವಿರುದ್ಧ ಮೂರು ತಿಂಗಳ ಹಿಂದೆಯೇ ಅತ್ಯಾಚಾರ ಆರೋಪದ ಬಗ್ಗೆ ದೂರು ನೀಡಲಾಗಿತ್ತು ಎಂಬ ವಿಚಾರ ಬಯಲಾಗಿದೆ.

ಶಾಸಕ ಮುನಿರತ್ನ ವಿರುದ್ದ ಜೂನ್​​ನಲ್ಲೇ ದೂರು ದಾಖಲಾಗಿತ್ತು. ಜೂನ್​​ನಲ್ಲಿಯೇ ಶಾಸಕ ಮುನಿರತ್ನ ವಿರುದ್ಧ ಸಂತ್ರಸ್ತ ಮಹಿಳೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಅರ್ಜಿಯಾಗಿ ಪಡೆದುಕೊಂಡಿದ್ದ ಪೊಲೀಸರು ಅರ್ಜಿ ಸಂಬಂಧ ವಿಚಾರಣೆಗೆ ಸಾಕ್ಷಿ ನೀಡುವಂತೆ ದೂರುದಾರೆಗೆ ತಿಳಿಸಿದ್ದರು. ಈ ಸಂಬಂಧ ದೂರುದಾರೆಗೆ ನೋಟಿಸ್ ನೀಡಲಾಗಿತ್ತು. ಆದ್ರೆ ದೂರುದಾರೆ ಪೊಲೀಸರ ಮುಂದೆಯೇ ಹಾಜಾರಾಗಿರಲಿಲ್ಲ. ಹೀಗಾಗಿ ಪೊಲೀಸರು ವಿಚಾರಣೆಯನ್ನು ಹಾಗೇಯೇ ಬಿಟ್ಟಿದ್ದರು. ಈಗ ಮತ್ತೆ ಅದೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರಿಂದ ಕೇಸ್ ದಾಖಲು ಮಾಡಿ ಅರೆಸ್ಟ್ ಮಾಡಲಾಗಿತ್ತು. ಆದರೆ ಈ ವಿಚಾರವಾಗಿ ಕೆಲ‌ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿಲ್ಲ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ