Breaking News

ವಿಶ್ವವಿಖ್ಯಾತ ‘ಮೈಸೂರು ದಸರಾ’ ಮಹೋತ್ಸವ ಉದ್ಘಾಟಿಸಿದ ಹಿರಿಯ ಸಾಹಿತಿ ಡಾ.ಹಂ.ಪ ನಾಗರಾಜಯ್ಯ

Spread the love

ರಮನೆ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ವಿಧ್ಯುಕ್ತ ಚಾಲನೆ ಸಿಕ್ಕಿದೆ.

ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಉದ್ಘಾಟಿಸಿದ್ದಾರೆ.

ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಅವರು ದಸರಾಗೆ ಅದ್ದೂರಿ ಚಾಲನೆ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮದ ಮಾಹಿತಿ
ಇಂದಿನಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದ್ದು, ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ (ಜಂಬೂ ಸವಾರಿ)ಗೆ ಚಾಲನೆ ದೊರೆಯಲಿದೆ. ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಅಂದು ದಸರಾ ಉದ್ಘಾಟನೆ, ವಸ್ತುಪ್ರದರ್ಶನ, ದಸರಾ ಕ್ರೀಡಾ ಉತ್ಸವ ಉದ್ಘಾಟನೆ, ಕುಸ್ತಿ ಪಂದ್ಯಾವಳಿ, ಸಾಂಸ್ಕೃತಿಕ ಕಾರ್ಯಕ್ರಮ, ಸಿನಿಮೋತ್ಸವ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು.

ಇಂದಿನಿಂದ 11ರವರೆಗೂ ಅರಮನೆಯಲ್ಲಿ ಖಾಸಗಿ ದರ್ಬಾರ್ ನಡೆಯಲಿದೆ. ಅಕ್ಟೋಬರ್ 12ರ ಶನಿವಾರ ಜಂಬೂ ಸವಾರಿ ನಡೆಯಲಿದೆ. ಮಧ್ಯಾಹ್ನ 1.41 ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿ ಮೆರವಣಿಗೆ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ.ಸಂಜೆ 7ಗಂಟೆಗೆ ಬನ್ನಿಮಂಟಪ ಆವರಣದಲ್ಲಿ ಪಂಜಿನ ಕವಾಯತು ನಡೆಯಲಿದೆ. ಪಂಜಿನ ಕವಾಯತ್ ನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.ಇನ್ನು ಯುವ ದಸರಾವನ್ನು ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಮುಕ್ತ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ